ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ, ಧರ್ಮಸ್ಥಳ ಇಲ್ಲಿನ 2023- 24 ನೇ ಸಾಲಿನ ವಿದ್ಯಾರ್ಥಿ ಸರಕಾರದ ರಚನೆಗಾಗಿ ಪ್ರಜಾಪ್ರಭುತ್ವದ ಚುನಾವಣಾ ಮಾದರಿಯಲ್ಲಿ ಚುನಾವಣೆಯನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ ಮಾದರಿಯಲ್ಲಿ ನಡೆಸಲಾಯಿತು.

ಚುನಾವಣೆಯ ಅಧಿಸೂಚನೆಯ ಮೂಲಕ ಆರಂಭವಾದ ಪ್ರಕ್ರಿಯೆಯು ಠೇವಣಿಯೊಂದಿಗೆ ನಾಮಪತ್ರ ಸಲ್ಲಿಸುವಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂತೆಗೆತ, ಚುನಾವಣಾ ಮತ್ತು ಪ್ರಚಾರ ನಡೆದು, ಚುನಾವಣಾ ದಿನ ಶಿಸ್ತು ಬದ್ಧರಾಗಿ ವಿದ್ಯಾರ್ಥಿಗಳು ತಮ್ಮ ಹಾಜರಾತಿಯ ಪ್ರಕಾರ, ತಮ್ಮ ಗುರುತನ್ನು ತಿಳಿಸಿ, ಸರತಿಯ ಸಾಲಿನಲ್ಲಿ ಬಂದು ಮತವನ್ನು ಚಲಾಯಿಸಿದರು.

ಸಾರ್ವತ್ರಿಕ ಚುನಾವಣೆ ಮಾದರಿಯಂತೆ ನಡೆದ ಈ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ ಮಾದರಿಯ ಆಪ್ ಮೂಲಕ ವಿದ್ಯಾರ್ಥಿಗಳು ಮತವನ್ನು ಚಲಾಯಿಸಿದರು.

ಶಾಲಾ ನಾಯಕನಾಗಿ ಜ್ಞಾನೇಶ್, ಶಾಲಾ ಉಪ ನಾಯಕನಾಗಿ ಪ್ರಜ್ವಲ್, ಶಾಲಾ ಉಪೋಪನಾಯಕನಾಗಿ ಪ್ರತೀಕ್ ಆಯ್ಕೆಯಾಗಿ, ಚುನಾವಣಾ ಫಲಿತಾಂಶದ ಘೋಷಣೆಯನ್ನು ಮಾಡಿ, ವಿಜೇತರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಪದ್ಮರಾಜ್ ಹಾಗೂ ಹಿರಿಯ ಶಿಕ್ಷಕ ಜಯರಾಮ ಮಯ್ಯ ಇವರ ಮಾರ್ಗದರ್ಶನದಲ್ಲಿ ಶಿಕ್ಷಕ ಯುವರಾಜ್ ಹಾಗೂ ವಿಕಾಸ್ ಆರಿಗಾ ಇವರ ನಿರ್ದೇಶನದಲ್ಲಿ ಎಲ್ಲಾ ಅಧ್ಯಾಪಕರ ಸಹಕಾರದೊಂದಿಗೆ ಮಾದರಿ ಚುನಾವಣಾ ಚಟುವಟಿಕೆಯು ಯಶಸ್ವಿಯಾಗಿ ಜರುಗಿತು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya
error: Content is protected !!