25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಬಳಂಜ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿ ಆಯ್ಕೆಯಾದ ಹರೀಶ್ ಪೂಂಜರವರನ್ನು ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಕಳೆದ ಹಲವಾರು ವರ್ಷಗಳಿಂದ ಶಿವಾಜಿ ಫ್ರೆಂಡ್ಸ್ ಕ್ಲಬ್ ಸಂಘಟನೆಯು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿರುವ ಬಳಂಜದ ಶ್ರೇಷ್ಠ ಸಂಘಟನೆಯಲ್ಲಿ ಒಂದಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿ ಪ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ ಹಾನಿಂಜ ವಹಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ, ಹಿರಿಯರಾದ ಪ್ರಮೋದ್ ಕುಮಾರ್ ಜೈನ್, ಬಳಂಜ ಶಾಲಾ ಮುಖ್ಯೋಪಾಧ್ಯಾಯರಾದ ವಿಲ್ಪ್ರೇಡ್ ಪಿಂಟೋ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ,ಗ್ರಾ.ಪಂ ಸದಸ್ಯರಾದ ಯಶೋಧರ ಶೆಟ್ಟಿ, ಯಕ್ಷಿತಾ ದೇವಾಡಿಗ, ಆಶಾ ಕಾರ್ಯಕರ್ತೆ ಮಂಗಳಾ ದೇವಾಡಿಗ, ಕ್ಲಬ್ ಕಾರ್ಯದರ್ಶಿ ಮಾಧವ ದೇವಾಡಿಗ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿವಾಜಿ ಫ್ರೆಂಡ್ಸ್ ಕ್ಲಬ್ ಪದಾಧಿಕಾರಿಗಳಾದ ಗುರುಪ್ರಸಾದ್ ಹೆಗ್ಡೆ, ಗಣೇಶ್ ದೇವಾಡಿಗ ಸಂಭ್ರಮ, ಸತೀಶ್ ಕೆ, ಈಶ್ವರ ಭಟ್, ರಾಘವೇಂದ್ರ ಭಟ್,ಯೋಗೀಶ್ ದೇವಾಡಿಗ, ಪ್ರಕಾಶ್ ದೇವಾಡಿಗ,ಯತೀಶ್ ದೇವಾಡಿಗ, ಡೀಕಯ್ಯ ಕುಲಾಲ್ ,ಆನಂದ ದೇವಾಡಿಗ ಶಾರಬೈಲು ಉಪಸ್ಥಿತರಿದ್ದರು.

ಶಿಕ್ಷಕ ಮಲ್ಲಿಕಾರ್ಜುನ ಸ್ವಾಗತಿಸಿದರು. ಹರೀಶ್ ದೇವಾಡಿಗ ಪ್ರಾಸ್ತಾವಿಕ ಮಾತನಾಡಿದರು. ಸಂತೋಷ್ ಕುಮಾರ್ ಕೆ ವಂದಿಸಿದರು.

Related posts

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಆ್ಯಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

Suddi Udaya
error: Content is protected !!