September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್‍ಸ್-ರೇಂಜರ್‍ಸ್ ಘಟಕ ಯುವರೆಡ್ ಕ್ರಾಸ್ ಘಟಕ ಹಾಗೂ ಎನ್‌ಸಿಸಿ ಇವುಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಆವರಣವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಿಸಲು ಪ್ರತಿಜ್ಞೆ, ಮಾಡಲಾಯಿತು.

ಕಾಲೇಜಿನ ಆವರಣದಲ್ಲಿ ಪ್ರಾಂಶುಪಾಲರಾದ ಡಾ.ಸುಬ್ರಹ್ಮಣ್ಯ ಕೆ. ಇವರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಗ್ರಂಥಪಾಲಕರಾದ ಪ್ರೊ. ಜಗದೀಶ್ ಎಸ್ ಇವರು ವಿಶ್ವ ಪರಿಸರ ದಿನಾಚರಣೆಯ ಆಶಯ ಪ್ಲಾಸ್ಟಿಕ್ ಮುಕ್ತ ಎಂಬ ವಿಷಯದ ಬಗ್ಗೆ ಮಾತನಾಡಿದರು.

ಪರಿಸರ ದಿನಾಚರಣೆಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಎಂಬ ವಿಷಯದ ಮೇಲೆ ಭಾಷಣ ಸ್ವರ್ಧೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯ ಸ್ವಾಗತಿಸಿದರು, ರೋವರ್ ಸ್ಕೌಟ್ ಲೀಡರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ರವಿ ಎಂ.ಎನ್. ಪ್ರಸ್ತಾವನೆಗೈದರು. ರೇಂಜರ್ ಲೀಡರ್ ಪ್ರೊ. ರಾಜೇಶ್ವರಿ ಹೆಚ್.ಎಸ್ ವಂದಿಸಿದರು, ಎನ್‌ಸಿಸಿ ಅಧಿಕಾರಿ ಡಾ. ಶೈಲೇಶ್ ಕುಮಾರ್ ಡಿ ಹೆಚ್ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಧರ್ಮಸ್ಥಳ: ಸಾಮೂಹಿಕ ವಿವಾಹ ನೋಂದಾವಣಾ ಕಛೇರಿ ಉದ್ಘಾಟನೆ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಬೆಳ್ತಂಗಡಿ: ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆಯಿಂದ ಸೂಚನೆ

Suddi Udaya
error: Content is protected !!