25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

ನಡ: ಸರಕಾರಿ ಪ್ರೌಢಶಾಲೆ ನಡ ಇದರ ಶಾಲಾ ಸಂಸತ್ತಿನ ಚುನಾವಣೆಯಲ್ಲಿ ಶಾಲಾ ನಾಯಕಿಯಾಗಿ ಕುಮಾರಿ ಇಂಚಿತಾ 9ನೇ ತರಗತಿ, ಹಾಗೂ ಉಪ ನಾಯಕನಾಗಿ 8 ನೇ ತರಗತಿಯ ಹೃತಿಕ್ ಆಯ್ಕೆಯಾಗಿರುತ್ತಾರೆ. ಸಾರ್ವತ್ರಿಕ ಮತದಾನದಲ್ಲಿ ಸದಸ್ಯರನ್ನು ಚುನಾವಣೆಯ ಮೂಲಕ ಆಯ್ಕೆ ಮಾಡುವ ಪ್ರಕ್ರಿಯೆಯ ಅರಿವು ಮಕ್ಕಳಲ್ಲಿ ಮೂಡಿಸುವ ಉದ್ದೇಶದಿಂದ, ಪೂರ್ತಿ ಮತದಾನವನ್ನು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿಯೇ ನಡೆಸಲಾಗಿತ್ತು.

ಶಾಲಾ ನಾಯಕ/ ಉಪನಾಯಕ ಮಾತ್ರವಲ್ಲದೆ ಉಳಿದ ಸ್ಥಾನಗಳಿಗೂ ಚುನಾವಣೆ ನಡೆಸಲಾಗಿದ್ದು ಕೃಷಿಮಂತ್ರಿಯಾಗಿ 9ನೇ ತರಗತಿಯ ಧನುಷ್,ಕ್ರೀಡಾ ಮಂತ್ರಿಯಾಗಿ 8ನೇ ತರಗತಿಯ ಪ್ರಮಿತ್, ಆರೋಗ್ಯ ಮತ್ತು ಸ್ವಚ್ಛತಾ ಮಂತ್ರಿಯಾಗಿ 9ನೇ ತರಗತಿಯ ಅಪೇಕ್ಷಾ, ಆಹಾರ ಮಂತ್ರಿಯಾಗಿ 9ನೇ ತರಗತಿಯ ಫಾತಿಮತ್ ರಾಫಿಯಾ, ನೀರಾವರಿ ಮತ್ತು ತೋಟಗಾರಿಕಾ ಮಂತ್ರಿಯಾಗಿ 9ನೇ ತರಗತಿ ಮನೀಷ್, ಶಿಕ್ಷಣ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ 9ನೇ ತರಗತಿಯ ಧನ್ಯಶ್ರೀ ಹಾಗೂ ಗೃಹ ಮಂತ್ರಿಯಾಗಿ 9 ನೇ ತರಗತಿ ಅಕ್ಷತ್ ಚುನಾವಣೆಯ ಮೂಲಕ ಆಯ್ಕೆಗೊಂಡರು. ಸಮಾಜ ವಿಜ್ಞಾನ ಶಿಕ್ಷಕ ಶಿವಪುತ್ರ ಸುಣಗಾರ ಚುನಾವಣಾಧಿಕಾರಿಯಾಗಿ ಚುನಾವಣೆಯನ್ನು ನಡೆಸಿಕೊಟ್ಟರು.

Related posts

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!