23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

ನಡ: ಸರಕಾರಿ ಪ್ರೌಢಶಾಲೆ ನಡ ಇದರ ಶಾಲಾ ಸಂಸತ್ತಿನ ಚುನಾವಣೆಯಲ್ಲಿ ಶಾಲಾ ನಾಯಕಿಯಾಗಿ ಕುಮಾರಿ ಇಂಚಿತಾ 9ನೇ ತರಗತಿ, ಹಾಗೂ ಉಪ ನಾಯಕನಾಗಿ 8 ನೇ ತರಗತಿಯ ಹೃತಿಕ್ ಆಯ್ಕೆಯಾಗಿರುತ್ತಾರೆ. ಸಾರ್ವತ್ರಿಕ ಮತದಾನದಲ್ಲಿ ಸದಸ್ಯರನ್ನು ಚುನಾವಣೆಯ ಮೂಲಕ ಆಯ್ಕೆ ಮಾಡುವ ಪ್ರಕ್ರಿಯೆಯ ಅರಿವು ಮಕ್ಕಳಲ್ಲಿ ಮೂಡಿಸುವ ಉದ್ದೇಶದಿಂದ, ಪೂರ್ತಿ ಮತದಾನವನ್ನು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿಯೇ ನಡೆಸಲಾಗಿತ್ತು.

ಶಾಲಾ ನಾಯಕ/ ಉಪನಾಯಕ ಮಾತ್ರವಲ್ಲದೆ ಉಳಿದ ಸ್ಥಾನಗಳಿಗೂ ಚುನಾವಣೆ ನಡೆಸಲಾಗಿದ್ದು ಕೃಷಿಮಂತ್ರಿಯಾಗಿ 9ನೇ ತರಗತಿಯ ಧನುಷ್,ಕ್ರೀಡಾ ಮಂತ್ರಿಯಾಗಿ 8ನೇ ತರಗತಿಯ ಪ್ರಮಿತ್, ಆರೋಗ್ಯ ಮತ್ತು ಸ್ವಚ್ಛತಾ ಮಂತ್ರಿಯಾಗಿ 9ನೇ ತರಗತಿಯ ಅಪೇಕ್ಷಾ, ಆಹಾರ ಮಂತ್ರಿಯಾಗಿ 9ನೇ ತರಗತಿಯ ಫಾತಿಮತ್ ರಾಫಿಯಾ, ನೀರಾವರಿ ಮತ್ತು ತೋಟಗಾರಿಕಾ ಮಂತ್ರಿಯಾಗಿ 9ನೇ ತರಗತಿ ಮನೀಷ್, ಶಿಕ್ಷಣ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ 9ನೇ ತರಗತಿಯ ಧನ್ಯಶ್ರೀ ಹಾಗೂ ಗೃಹ ಮಂತ್ರಿಯಾಗಿ 9 ನೇ ತರಗತಿ ಅಕ್ಷತ್ ಚುನಾವಣೆಯ ಮೂಲಕ ಆಯ್ಕೆಗೊಂಡರು. ಸಮಾಜ ವಿಜ್ಞಾನ ಶಿಕ್ಷಕ ಶಿವಪುತ್ರ ಸುಣಗಾರ ಚುನಾವಣಾಧಿಕಾರಿಯಾಗಿ ಚುನಾವಣೆಯನ್ನು ನಡೆಸಿಕೊಟ್ಟರು.

Related posts

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
error: Content is protected !!