23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

ವೇಣೂರು: ಶೈಕ್ಷಣಿಕ ಕ್ಷೇತ್ರಕ್ಕೆ ಅತ್ಯಾಧುನಿಕ ಸವಲತ್ತುಗಳ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಿಎಂಶ್ರೀ ಯೋಜನೆ ಜಾರಿಗೆ ತಂದರು. ಅವರು ನೀಡಿರುವ ಕನಸಿನ ಯೋಜನೆ ಅಚ್ಚುಕಟ್ಟಾಗಿ ಅನುಷ್ಠಾನದ ವಿಶ್ವಾಸದಿಂದ ಬಜಿರೆಯನ್ನು ಆಯ್ಕೆ ಮಾಡಿದ್ದೇವೆ. ಇಲ್ಲಿಯ ಪೋಷಕರೆಲ್ಲರು ಸೇರಿ ನರೇಂದ್ರಮೋದಿಯವರಿಗೆ ಶಕ್ತಿ ತುಂಬುತ್ತೀರಿ ಎಂಬ ವಿಶ್ವಾಸವಿದೆ. ಗುಣಮಟ್ಟದ ಶಿಕ್ಷಣದಿಂದ ಇಲ್ಲಿಯ ಮಕ್ಕಳು ಆದರ್ಶ ಪುರುಷರಾಗಿ ಬೆಳೆಯಲಿ, ಪೋಷಕರಿಲ್ಲದ ಮಗುವನ್ನು ದತ್ತು ಪಡೆದ ತಾಯಂದಿರ ಸಮಿತಿ ಅದರ್ಶರು ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ಜೂ 10 ರಂದು ಕೇಂದ್ರ ಸರಕಾರದ ಪಿಎಂಶ್ರೀ (ಪ್ರಧಾನಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ) ಯೋಜನೆಗೆ ಆಯ್ಕೆಯಾಗಿರುವ ಬಜಿರೆ ಶಾಲೆಯಲ್ಲಿ ಯೋಜನೆಯ ಅನುಷ್ಠಾನದ ಎಲ್‌ಕೆಜಿ ತರಗತಿಗೆ ಚಾಲನೆ ನೀಡಿ ಮಾತನಾಡಿದರು.


ಯೋಜನೆಗೆ ಆಯ್ಕೆಯಾಗಿರುವ ಬಜಿರೆ ಶಾಲೆಯ ಚಿತ್ರಣ ಮುಂದಿನ ದಿನಗಳಲ್ಲಿ ಬದಲಾಗಿದ್ದು, ಗುಣಮಟ್ಟದ ಶಿಕ್ಷಣದಿಂದ ಇಲ್ಲಿಯ ಪ್ರತಿಮನೆಯ ಮಕ್ಕಳು ಸ್ವಾಮಿ ವಿವೇಕಾನಂದ, ಡಾ| ಅಂಬೇಡ್ಕರ್, ನರೇಂದ್ರ ಮೋದಿಯವರಂತೆ ಬೆಳೆಯಲಿ, ಪೋಷಕರಿಲ್ಲದ ಮಗುವನ್ನು ದತ್ತು ಪಡೆದ ಮಗುವಿಗೆ ನಾನೂ ವೈಯುಕ್ತಿಕ ನೆಲೆಯಲ್ಲಿ ಸಹಕಾರ ನೀಡುತ್ತೇನೆ ಎಂದು ಶಾಸಕರು ಹೇಳಿದರು.
ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ವಿರುಪಾಕ್ಷಪ್ಪ ಎಚ್.ಎಸ್., ವಿವೇಕಾನಂದ ಸೇವಾ ಟ್ರಸ್ಟ್ ಅಧ್ಯಕ್ಷ, ನಿವೃತ್ತ ಉಪನ್ಯಾಸಕ ಯಂ. ವಿಜಯರಾಜ ಅಧಿಕಾರಿ, ಗ್ರಾ.ಪಂ. ಸದಸ್ಯರಾದ ಅರುಣ್ ಕ್ರಾಸ್ತ, ಸುನಿಲ್ ಕುಮಾರ್, ಮಲ್ಲಿಕಾ, ಜಯಂತಿ, ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಪೂಜಾರಿ, ಸಿಆರ್‌ಪಿ ರಾಜೇಶ್, ದಾನಿಗಳಾದ ಲೋಕೇಶ್ ಎ. ಕೋರ್ಲೋಡಿ, ನವೀನ್ ಪೂಜಾರಿ ಪಚ್ಚೇರಿ, ತಾಯಂದಿರ ಸಮಿತಿ ಅಧ್ಯಕ್ಷೆ ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಪ್ರಾಸ್ತಾವಿಸಿ ಸ್ವಾಗತಿಸಿದರು. ಶಿಕ್ಷಕಿಯರಾದ ನಾಗವೇಣಿ ಮತ್ತು ಅಶ್ವಿನಿ ನಿರೂಪಿಸಿ, ಶಿಕ್ಷಕಿ ಗ್ರೇಸಿ ಪ್ಲಾವ್ಲಾ ವಂದಿಸಿದರು.

Related posts

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!