26.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

ಬೆಳ್ತಂಗಡಿ :ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಎದರುನಲ್ಲಿರುವ ಮಂಜುನಾಥ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪವರ್ ಆನ್ ಬ್ಯಾಟರಿ ಅಂಗಡಿಯೊಂದಕ್ಕೆ ಕನ್ನ ಹಾಕಿದ ಕಳ್ಳರು ಶಟರ್ ಒಡೆದು ಒಳಗೆ ಹೋಗಲು ಪ್ರಯತ್ನ ಮಾಡಿದ್ದಾರೆ.

ಶೀತಲ್ ಜೈನ್ ಎಂಬುವವರಿಗೆ ಸೇರಿದ ಅಂಗಡಿಯಲ್ಲಿ ಕಳ್ಳರು ತಡರಾತ್ರಿ ಕೈಚಳಕ ತೋರಿದ್ದಾರೆ. ಅಂಗಡಿಯ ಒಂದು ಶಟರ್ ಒಡೆದು ಹಾಕಿದ್ದಾರೆ. ಒಳಗೆ ಹೋಗಲು ಗ್ಲಾಸ್ ಇದ್ದುದರಿಂದ ಸಾಧ್ಯವಾಗಿಲ್ಲ. ಇನ್ನೊಂದು ಶಟರ್ ಒಡೆಯಲು ಪ್ರಯತ್ನ ಪಟ್ಟು ವಿಫಲರಾಗಿದ್ದಾರೆ.

ಶನಿವಾರ ಬೆಳಿಗ್ಗೆ ಎಂದಿನಂತೆ ಅಂಗಡಿ ತೆರೆಯಲು ಬಂದಾಗ ಮಾಲೀಕರಿಗೆ ಕಳ್ಳತನಕ್ಕೆ ಪ್ರಯತ್ನ ಪಟ್ಟಿದ್ದು ಗೊತ್ತಾಗಿದೆ. ಒಳಗೆ ಹೋಗಲು ಸಾಧ್ಯವಾಗದಿದ್ದುದರಿಂದ ಯಾವುದೇ ಸ್ವತ್ತು ಕಳವಾಗಿಲ್ಲ ಎಂದು ಸಂಸ್ಥೆಯ ಮಾಲಕ ಶೀತಲ್ ಜೈನ್ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಇಗಾಗಲೇ ಬೆಳ್ತಂಗಡಿ ಪೋಲೀಸರಿಗೆ ಮಾಹಿತಿ ನೀಡಲಾಗಿದೆ.

Related posts

ಜು.21: ವಿದ್ಯಾಶ್ರೀ ಅಡೂರ್ ರವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆ

Suddi Udaya

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ – 10 ದಿನಗಳ ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ

Suddi Udaya

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

Suddi Udaya

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya
error: Content is protected !!