ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

ಬೆಳ್ತಂಗಡಿ :ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಎದರುನಲ್ಲಿರುವ ಮಂಜುನಾಥ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪವರ್ ಆನ್ ಬ್ಯಾಟರಿ ಅಂಗಡಿಯೊಂದಕ್ಕೆ ಕನ್ನ ಹಾಕಿದ ಕಳ್ಳರು ಶಟರ್ ಒಡೆದು ಒಳಗೆ ಹೋಗಲು ಪ್ರಯತ್ನ ಮಾಡಿದ್ದಾರೆ.

ಶೀತಲ್ ಜೈನ್ ಎಂಬುವವರಿಗೆ ಸೇರಿದ ಅಂಗಡಿಯಲ್ಲಿ ಕಳ್ಳರು ತಡರಾತ್ರಿ ಕೈಚಳಕ ತೋರಿದ್ದಾರೆ. ಅಂಗಡಿಯ ಒಂದು ಶಟರ್ ಒಡೆದು ಹಾಕಿದ್ದಾರೆ. ಒಳಗೆ ಹೋಗಲು ಗ್ಲಾಸ್ ಇದ್ದುದರಿಂದ ಸಾಧ್ಯವಾಗಿಲ್ಲ. ಇನ್ನೊಂದು ಶಟರ್ ಒಡೆಯಲು ಪ್ರಯತ್ನ ಪಟ್ಟು ವಿಫಲರಾಗಿದ್ದಾರೆ.

ಶನಿವಾರ ಬೆಳಿಗ್ಗೆ ಎಂದಿನಂತೆ ಅಂಗಡಿ ತೆರೆಯಲು ಬಂದಾಗ ಮಾಲೀಕರಿಗೆ ಕಳ್ಳತನಕ್ಕೆ ಪ್ರಯತ್ನ ಪಟ್ಟಿದ್ದು ಗೊತ್ತಾಗಿದೆ. ಒಳಗೆ ಹೋಗಲು ಸಾಧ್ಯವಾಗದಿದ್ದುದರಿಂದ ಯಾವುದೇ ಸ್ವತ್ತು ಕಳವಾಗಿಲ್ಲ ಎಂದು ಸಂಸ್ಥೆಯ ಮಾಲಕ ಶೀತಲ್ ಜೈನ್ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಇಗಾಗಲೇ ಬೆಳ್ತಂಗಡಿ ಪೋಲೀಸರಿಗೆ ಮಾಹಿತಿ ನೀಡಲಾಗಿದೆ.

Related posts

ಬೆಳ್ತಂಗಡಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

Suddi Udaya

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸಾಧಕರಿಗೆ ಅಭಿನಂದನೆ

Suddi Udaya
error: Content is protected !!