April 2, 2025
Uncategorizedತಾಲೂಕು ಸುದ್ದಿವರದಿ

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಚಾರ್ಮಾಡಿ: ಚಾರ್ಮಾಡಿ ಘಾಟ್ ಸಮೀಪದ ನಿರ್ಜನ ಪ್ರದೇಶದಲ್ಲಿ ಬಂಟ್ವಾಳ ತಾಲೂಕಿನ ಯುವಕನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಮೃತದೇಹವನ್ನು ಇರಾ ಗ್ರಾಮದ ಕುಕ್ಕಾಜೆ – ಕಾಪಿಕಾಡ್ ನಿವಾಸಿ ದಿ. ಅಬ್ಬಾಸ್ ಎಂಬವರ ಪುತ್ರ ಸವಾದ್ (35ವ) ಎಂದು ಗುರುತಿಸಲಾಗಿದೆ.

ಮೃತ ಸವಾದ್ 10 ದಿನಗಳಿಂದ ಕಾಣೆಯಾಗಿದ್ದು, ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಈ ಹಿಂದೆ ಕೂಡಾ ಈತ ಇದೇ ತರಹ ಸಂಪರ್ಕಕ್ಕೆ ಸಿಗದೆ ಕೆಲವು ದಿನಗಳ ಬಳಿಕ ಮನೆಗೆ ಬರುತ್ತಿದ್ದ ಎನ್ನಲಾಗಿದ್ದು, ಮನೆಯವರು ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಈತನ ಅಣ್ಣನಿಗೆ ಸವಾದ್ ನ ಕೊಲೆಯಾಗಿರುವ ಬಗ್ಗೆ ವ್ಯಕ್ತಿಯೊಬ್ಬ ಮಾಹಿತಿ ನೀಡಿದ್ದು, ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಶರೀರದ ಗುರುತು ಪತ್ತೆ ಹಚ್ಚಿದ್ದಾರೆ.

ಮೃತ ದೇಹದ ಗುರುತು ಸಿಗದ ರೀತಿಯಲ್ಲಿ ಮುಖಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದ್ದು, ಮಾದಕ ವ್ಯಸನಿಗಳ ತಂಡ ಈ ಕೃತ್ಯ ಎಸಗಿದ್ದಾರೆ ಎಂದು ದೂರಲಾಗಿದೆ.

ಘಟನಾ ಸ್ಥಳಕ್ಕೆ ಬಣಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!