22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedತಾಲೂಕು ಸುದ್ದಿವರದಿ

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಚಾರ್ಮಾಡಿ: ಚಾರ್ಮಾಡಿ ಘಾಟ್ ಸಮೀಪದ ನಿರ್ಜನ ಪ್ರದೇಶದಲ್ಲಿ ಬಂಟ್ವಾಳ ತಾಲೂಕಿನ ಯುವಕನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಮೃತದೇಹವನ್ನು ಇರಾ ಗ್ರಾಮದ ಕುಕ್ಕಾಜೆ – ಕಾಪಿಕಾಡ್ ನಿವಾಸಿ ದಿ. ಅಬ್ಬಾಸ್ ಎಂಬವರ ಪುತ್ರ ಸವಾದ್ (35ವ) ಎಂದು ಗುರುತಿಸಲಾಗಿದೆ.

ಮೃತ ಸವಾದ್ 10 ದಿನಗಳಿಂದ ಕಾಣೆಯಾಗಿದ್ದು, ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಈ ಹಿಂದೆ ಕೂಡಾ ಈತ ಇದೇ ತರಹ ಸಂಪರ್ಕಕ್ಕೆ ಸಿಗದೆ ಕೆಲವು ದಿನಗಳ ಬಳಿಕ ಮನೆಗೆ ಬರುತ್ತಿದ್ದ ಎನ್ನಲಾಗಿದ್ದು, ಮನೆಯವರು ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಈತನ ಅಣ್ಣನಿಗೆ ಸವಾದ್ ನ ಕೊಲೆಯಾಗಿರುವ ಬಗ್ಗೆ ವ್ಯಕ್ತಿಯೊಬ್ಬ ಮಾಹಿತಿ ನೀಡಿದ್ದು, ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಶರೀರದ ಗುರುತು ಪತ್ತೆ ಹಚ್ಚಿದ್ದಾರೆ.

ಮೃತ ದೇಹದ ಗುರುತು ಸಿಗದ ರೀತಿಯಲ್ಲಿ ಮುಖಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದ್ದು, ಮಾದಕ ವ್ಯಸನಿಗಳ ತಂಡ ಈ ಕೃತ್ಯ ಎಸಗಿದ್ದಾರೆ ಎಂದು ದೂರಲಾಗಿದೆ.

ಘಟನಾ ಸ್ಥಳಕ್ಕೆ ಬಣಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

Related posts

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Suddi Udaya

ಜೂ.15-21: ಬೆಳ್ತಂಗಡಿಯಲ್ಲಿ ಖ್ಯಾತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!