September 6, 2026
Uncategorizedತಾಲೂಕು ಸುದ್ದಿವರದಿ

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಚಾರ್ಮಾಡಿ: ಚಾರ್ಮಾಡಿ ಘಾಟ್ ಸಮೀಪದ ನಿರ್ಜನ ಪ್ರದೇಶದಲ್ಲಿ ಬಂಟ್ವಾಳ ತಾಲೂಕಿನ ಯುವಕನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಮೃತದೇಹವನ್ನು ಇರಾ ಗ್ರಾಮದ ಕುಕ್ಕಾಜೆ – ಕಾಪಿಕಾಡ್ ನಿವಾಸಿ ದಿ. ಅಬ್ಬಾಸ್ ಎಂಬವರ ಪುತ್ರ ಸವಾದ್ (35ವ) ಎಂದು ಗುರುತಿಸಲಾಗಿದೆ.

ಮೃತ ಸವಾದ್ 10 ದಿನಗಳಿಂದ ಕಾಣೆಯಾಗಿದ್ದು, ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಈ ಹಿಂದೆ ಕೂಡಾ ಈತ ಇದೇ ತರಹ ಸಂಪರ್ಕಕ್ಕೆ ಸಿಗದೆ ಕೆಲವು ದಿನಗಳ ಬಳಿಕ ಮನೆಗೆ ಬರುತ್ತಿದ್ದ ಎನ್ನಲಾಗಿದ್ದು, ಮನೆಯವರು ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಈತನ ಅಣ್ಣನಿಗೆ ಸವಾದ್ ನ ಕೊಲೆಯಾಗಿರುವ ಬಗ್ಗೆ ವ್ಯಕ್ತಿಯೊಬ್ಬ ಮಾಹಿತಿ ನೀಡಿದ್ದು, ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಶರೀರದ ಗುರುತು ಪತ್ತೆ ಹಚ್ಚಿದ್ದಾರೆ.

ಮೃತ ದೇಹದ ಗುರುತು ಸಿಗದ ರೀತಿಯಲ್ಲಿ ಮುಖಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದ್ದು, ಮಾದಕ ವ್ಯಸನಿಗಳ ತಂಡ ಈ ಕೃತ್ಯ ಎಸಗಿದ್ದಾರೆ ಎಂದು ದೂರಲಾಗಿದೆ.

ಘಟನಾ ಸ್ಥಳಕ್ಕೆ ಬಣಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!