July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

ಲಾಯಿಲ : ಲಾಯಿಲ ಗ್ರಾಮದ ಬಜಕ್ರೆಸಾಲು ಸೇತುವೆ ಅಡಿಯಲ್ಲಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆಯಾಗಿದೆ.

ಲಾಯಿಲದಿಂದ ಮುಂಡೂರು ಸಂಪರ್ಕಿಸುವ ಸೋಮವತಿ ನದಿ ಬಜಕ್ರೆಸಾಲು ಎಂಬಲ್ಲಿ ಸೇತುವೆಯ ಅಡಿ ಭಾಗದಲ್ಲಿ ಜೂ 10 ರಂದು ಮಧ್ಯಾಹ್ನ ಸ್ಥಳೀಯ ನಿವಾಸಿ ರಾಜು ಅವರು ಕಲ್ಲಿನ ಮೇಲೆ ಇರುವ ಪ್ಲಾಸ್ಟಿಕ್ ಗೋಣಿಗಳನ್ನು ಗಮನಿಸಿ ಹತ್ತಿರ ಹೋಗಿ ನೋಡಿದಾಗ ಎರಡು ಸ್ಟೀಲ್ ಡಬ್ಬಗಳು ಪತ್ತೆಯಾಗಿವೆ. ಈ ಬಗ್ಗೆ ಅವರು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ಅವರ ಗಮನಕ್ಕೆ ತಂದಾಗ ಅವರು ಪೊಲೀಸ್ ಅವರಿಗೆ ಮಾಹಿತಿ ನೀಡಿದ್ದಾರೆ.

ಯಾರೋ ಕಳ್ಳರು ಕಳೆದ ರಾತ್ರಿ ಎಲ್ಲಿಂದಲೂ ಕಳ್ಳತನ ಮಾಡಿ ಗೋಣಿಗಳಲ್ಲಿ ತುಂಬಿಸಿಕೊಂಡು ಬಂದು ಸೇತುವೆ ಅಡಿಯಲ್ಲಿ ಇದನ್ನು ಒಡೆದು ಹಣ ಕಳವು ಗೈದಿರುವ ಶಂಕೆ ವ್ಯಕ್ತವಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಎಎಸ್‌ಐ ದೇವಪ್ಪ, ಕ್ರೈಂ ಪಿಸಿಗಳಾದ ಚರಣ್ ರಾಜ್, ಅಶೋಕ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಡಬ್ಬದೊಳಗೆ ಬೀಗ ಮತ್ತು ಕೀ ಪತ್ತೆಯಾಗಿದ್ದು . ತನಿಖೆಗಾಗಿ ಎರಡು ಕಾಣಿಕೆ ಡಬ್ಬಿಯನ್ನು ವಶಕ್ಕೆ ಪಡೆದಿದ್ದಾರೆ. ಕಾಣಿಕೆ ಡಬ್ಬಿಗಳು ಎಲ್ಲಿಂದ ಕಳ್ಳತನವಾಗಿದೆ ಎಂದು ಇನ್ನಷ್ಟೆ ತಿಳಿ ಬರಬೇಕಾಗಿದೆ.

Related posts

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

Suddi Udaya
error: Content is protected !!