38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

ಬೆಳ್ತಂಗಡಿ ಅರಣ್ಯ ಇಲಾಖೆ, ವಾಣಿ ಶಾಲೆ ಬೆಳ್ತಂಗಡಿ, ಸೈಂಟ್ ಮೇರಿಸ್ ಶಾಲೆ ಲಾಯಿಲ, ಸರಕಾರಿ ಪ್ರಾಥಮಿಕ ಶಾಲೆ ಪಡ್ಲಾಡಿ ಇವುಗಳ ಆಶ್ರಯದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಲಾಯಿಲ ಅರಣ್ಯ ಪ್ರದೇಶದಲ್ಲಿ ಜೂ.10 ರಂದು ನಡೆಸಲಾಯಿತು.

ಲಾಯಿಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಆಶಾ ಸಾಲ್ದಾನ ಕಾರ್ಯಕ್ರಮ ಉದ್ಘಾಟಿಸಿದರು.

ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಮಾತನಾಡಿ “ಸಾರ್ವಜನಿಕರು ತಾವು ಉಪಯೋಗಿಸುವ ಯಾವುದೇ ಫಲಗಳ ಬೀಜಗಳನ್ನು ಬಿಸಾಡದೇ ಸಂರಕ್ಷಿಸಿ ಗಿಡಮಾಡಿ ಬೆಳೆಸಬೇಕು. ಮಕ್ಕಳಿಗೆ ಭೌತಿಕ ಮತ್ತು ಭೌಗೋಳಿಕ ಅರಣ್ಯದ ಕುರಿತು ಮಾಹಿತಿಯನ್ನು ನೀಡಿ ಅರಣ್ಯ ಸಂರಕ್ಷಣೆಯ ಬಗ್ಗೆ ಎಳವೆಯಿಂದಲೆ ಅರಿವು ಮೂಡಿಸಬೇಕು. ಸಸ್ಯಾಹಾರಿ ಮತ್ತು ಮಾಂಸಾಹಾರಿ ಪ್ರಾಣಿಗಳು ಇರುವ ಅರಣ್ಯ ಪ್ರದೇಶ ಪ್ರಕೃತಿಯ ಸಮತೋಲನಕ್ಕೆ ಕಾರಣವಾಗುತ್ತದೆ” ಎಂದು ಹೇಳಿದರು.


ಲಾಯಿಲದ ಸ್ನೇಕ್ ಅಶೋಕ್, ಆರ್‌ ಎಫ್ ಒ ತ್ಯಾಗರಾಜ್, ಡಿಆರ್ ಎಫ್ ಒ ಗಳಾದ ರವೀಂದ್ರ ಕೆ, ಯತೀಂದ್ರ, ರವೀಂದ್ರ ಅಂಕಲಗಿ, ಭವಾನಿ ಶಂಕರ್, ಹರಿಪ್ರಸಾದ್, ಪೂಜಾ,ರಾಜೇಶ್ ಎಸ್,ರಾಜಶೇಖರ್, ಗಸ್ತು ಅರಣ್ಯ ಪಾಲಕರಾದ ರಾಘವೇಂದ್ರ, ಪಾಂಡುರಂಗ ಕಮತಿ, ಪರಮೇಶ್ವರ್, ಸಂತೋಷ್ ,ಶರತ್, ಅಖಿಲೇಶ್, ಸತೀಶ್, ಸದಾನಂದ್,ಗಪೂರ್, ಪ್ರದೀಪ್ ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು. ಸುಮಾರು 10ಹೆಕ್ಟೇರ್ ಪ್ರದೇಶದಲ್ಲಿ 125ಮಂದಿ ಶಾಲಾ ಮಕ್ಕಳ ಸಹಕಾರದಲ್ಲಿ ಬಿತ್ತೋತ್ಸವ ನಡೆಯಿತು.

Related posts

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ವೇಣೂರು: ಸುಮಾರು 6ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ

Suddi Udaya

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya
error: Content is protected !!