April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

ಬೆಳ್ತಂಗಡಿ ಅರಣ್ಯ ಇಲಾಖೆ, ವಾಣಿ ಶಾಲೆ ಬೆಳ್ತಂಗಡಿ, ಸೈಂಟ್ ಮೇರಿಸ್ ಶಾಲೆ ಲಾಯಿಲ, ಸರಕಾರಿ ಪ್ರಾಥಮಿಕ ಶಾಲೆ ಪಡ್ಲಾಡಿ ಇವುಗಳ ಆಶ್ರಯದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಲಾಯಿಲ ಅರಣ್ಯ ಪ್ರದೇಶದಲ್ಲಿ ಜೂ.10 ರಂದು ನಡೆಸಲಾಯಿತು.

ಲಾಯಿಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಆಶಾ ಸಾಲ್ದಾನ ಕಾರ್ಯಕ್ರಮ ಉದ್ಘಾಟಿಸಿದರು.

ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಮಾತನಾಡಿ “ಸಾರ್ವಜನಿಕರು ತಾವು ಉಪಯೋಗಿಸುವ ಯಾವುದೇ ಫಲಗಳ ಬೀಜಗಳನ್ನು ಬಿಸಾಡದೇ ಸಂರಕ್ಷಿಸಿ ಗಿಡಮಾಡಿ ಬೆಳೆಸಬೇಕು. ಮಕ್ಕಳಿಗೆ ಭೌತಿಕ ಮತ್ತು ಭೌಗೋಳಿಕ ಅರಣ್ಯದ ಕುರಿತು ಮಾಹಿತಿಯನ್ನು ನೀಡಿ ಅರಣ್ಯ ಸಂರಕ್ಷಣೆಯ ಬಗ್ಗೆ ಎಳವೆಯಿಂದಲೆ ಅರಿವು ಮೂಡಿಸಬೇಕು. ಸಸ್ಯಾಹಾರಿ ಮತ್ತು ಮಾಂಸಾಹಾರಿ ಪ್ರಾಣಿಗಳು ಇರುವ ಅರಣ್ಯ ಪ್ರದೇಶ ಪ್ರಕೃತಿಯ ಸಮತೋಲನಕ್ಕೆ ಕಾರಣವಾಗುತ್ತದೆ” ಎಂದು ಹೇಳಿದರು.


ಲಾಯಿಲದ ಸ್ನೇಕ್ ಅಶೋಕ್, ಆರ್‌ ಎಫ್ ಒ ತ್ಯಾಗರಾಜ್, ಡಿಆರ್ ಎಫ್ ಒ ಗಳಾದ ರವೀಂದ್ರ ಕೆ, ಯತೀಂದ್ರ, ರವೀಂದ್ರ ಅಂಕಲಗಿ, ಭವಾನಿ ಶಂಕರ್, ಹರಿಪ್ರಸಾದ್, ಪೂಜಾ,ರಾಜೇಶ್ ಎಸ್,ರಾಜಶೇಖರ್, ಗಸ್ತು ಅರಣ್ಯ ಪಾಲಕರಾದ ರಾಘವೇಂದ್ರ, ಪಾಂಡುರಂಗ ಕಮತಿ, ಪರಮೇಶ್ವರ್, ಸಂತೋಷ್ ,ಶರತ್, ಅಖಿಲೇಶ್, ಸತೀಶ್, ಸದಾನಂದ್,ಗಪೂರ್, ಪ್ರದೀಪ್ ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು. ಸುಮಾರು 10ಹೆಕ್ಟೇರ್ ಪ್ರದೇಶದಲ್ಲಿ 125ಮಂದಿ ಶಾಲಾ ಮಕ್ಕಳ ಸಹಕಾರದಲ್ಲಿ ಬಿತ್ತೋತ್ಸವ ನಡೆಯಿತು.

Related posts

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya
error: Content is protected !!