25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

ಬೆಳ್ತಂಗಡಿ ಅರಣ್ಯ ಇಲಾಖೆ, ವಾಣಿ ಶಾಲೆ ಬೆಳ್ತಂಗಡಿ, ಸೈಂಟ್ ಮೇರಿಸ್ ಶಾಲೆ ಲಾಯಿಲ, ಸರಕಾರಿ ಪ್ರಾಥಮಿಕ ಶಾಲೆ ಪಡ್ಲಾಡಿ ಇವುಗಳ ಆಶ್ರಯದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಲಾಯಿಲ ಅರಣ್ಯ ಪ್ರದೇಶದಲ್ಲಿ ಜೂ.10 ರಂದು ನಡೆಸಲಾಯಿತು.

ಲಾಯಿಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಆಶಾ ಸಾಲ್ದಾನ ಕಾರ್ಯಕ್ರಮ ಉದ್ಘಾಟಿಸಿದರು.

ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಮಾತನಾಡಿ “ಸಾರ್ವಜನಿಕರು ತಾವು ಉಪಯೋಗಿಸುವ ಯಾವುದೇ ಫಲಗಳ ಬೀಜಗಳನ್ನು ಬಿಸಾಡದೇ ಸಂರಕ್ಷಿಸಿ ಗಿಡಮಾಡಿ ಬೆಳೆಸಬೇಕು. ಮಕ್ಕಳಿಗೆ ಭೌತಿಕ ಮತ್ತು ಭೌಗೋಳಿಕ ಅರಣ್ಯದ ಕುರಿತು ಮಾಹಿತಿಯನ್ನು ನೀಡಿ ಅರಣ್ಯ ಸಂರಕ್ಷಣೆಯ ಬಗ್ಗೆ ಎಳವೆಯಿಂದಲೆ ಅರಿವು ಮೂಡಿಸಬೇಕು. ಸಸ್ಯಾಹಾರಿ ಮತ್ತು ಮಾಂಸಾಹಾರಿ ಪ್ರಾಣಿಗಳು ಇರುವ ಅರಣ್ಯ ಪ್ರದೇಶ ಪ್ರಕೃತಿಯ ಸಮತೋಲನಕ್ಕೆ ಕಾರಣವಾಗುತ್ತದೆ” ಎಂದು ಹೇಳಿದರು.


ಲಾಯಿಲದ ಸ್ನೇಕ್ ಅಶೋಕ್, ಆರ್‌ ಎಫ್ ಒ ತ್ಯಾಗರಾಜ್, ಡಿಆರ್ ಎಫ್ ಒ ಗಳಾದ ರವೀಂದ್ರ ಕೆ, ಯತೀಂದ್ರ, ರವೀಂದ್ರ ಅಂಕಲಗಿ, ಭವಾನಿ ಶಂಕರ್, ಹರಿಪ್ರಸಾದ್, ಪೂಜಾ,ರಾಜೇಶ್ ಎಸ್,ರಾಜಶೇಖರ್, ಗಸ್ತು ಅರಣ್ಯ ಪಾಲಕರಾದ ರಾಘವೇಂದ್ರ, ಪಾಂಡುರಂಗ ಕಮತಿ, ಪರಮೇಶ್ವರ್, ಸಂತೋಷ್ ,ಶರತ್, ಅಖಿಲೇಶ್, ಸತೀಶ್, ಸದಾನಂದ್,ಗಪೂರ್, ಪ್ರದೀಪ್ ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು. ಸುಮಾರು 10ಹೆಕ್ಟೇರ್ ಪ್ರದೇಶದಲ್ಲಿ 125ಮಂದಿ ಶಾಲಾ ಮಕ್ಕಳ ಸಹಕಾರದಲ್ಲಿ ಬಿತ್ತೋತ್ಸವ ನಡೆಯಿತು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya
error: Content is protected !!