24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

ಬೆಳ್ತಂಗಡಿ ಅರಣ್ಯ ಇಲಾಖೆ, ವಾಣಿ ಶಾಲೆ ಬೆಳ್ತಂಗಡಿ, ಸೈಂಟ್ ಮೇರಿಸ್ ಶಾಲೆ ಲಾಯಿಲ, ಸರಕಾರಿ ಪ್ರಾಥಮಿಕ ಶಾಲೆ ಪಡ್ಲಾಡಿ ಇವುಗಳ ಆಶ್ರಯದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಲಾಯಿಲ ಅರಣ್ಯ ಪ್ರದೇಶದಲ್ಲಿ ಜೂ.10 ರಂದು ನಡೆಸಲಾಯಿತು.

ಲಾಯಿಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಆಶಾ ಸಾಲ್ದಾನ ಕಾರ್ಯಕ್ರಮ ಉದ್ಘಾಟಿಸಿದರು.

ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಮಾತನಾಡಿ “ಸಾರ್ವಜನಿಕರು ತಾವು ಉಪಯೋಗಿಸುವ ಯಾವುದೇ ಫಲಗಳ ಬೀಜಗಳನ್ನು ಬಿಸಾಡದೇ ಸಂರಕ್ಷಿಸಿ ಗಿಡಮಾಡಿ ಬೆಳೆಸಬೇಕು. ಮಕ್ಕಳಿಗೆ ಭೌತಿಕ ಮತ್ತು ಭೌಗೋಳಿಕ ಅರಣ್ಯದ ಕುರಿತು ಮಾಹಿತಿಯನ್ನು ನೀಡಿ ಅರಣ್ಯ ಸಂರಕ್ಷಣೆಯ ಬಗ್ಗೆ ಎಳವೆಯಿಂದಲೆ ಅರಿವು ಮೂಡಿಸಬೇಕು. ಸಸ್ಯಾಹಾರಿ ಮತ್ತು ಮಾಂಸಾಹಾರಿ ಪ್ರಾಣಿಗಳು ಇರುವ ಅರಣ್ಯ ಪ್ರದೇಶ ಪ್ರಕೃತಿಯ ಸಮತೋಲನಕ್ಕೆ ಕಾರಣವಾಗುತ್ತದೆ” ಎಂದು ಹೇಳಿದರು.


ಲಾಯಿಲದ ಸ್ನೇಕ್ ಅಶೋಕ್, ಆರ್‌ ಎಫ್ ಒ ತ್ಯಾಗರಾಜ್, ಡಿಆರ್ ಎಫ್ ಒ ಗಳಾದ ರವೀಂದ್ರ ಕೆ, ಯತೀಂದ್ರ, ರವೀಂದ್ರ ಅಂಕಲಗಿ, ಭವಾನಿ ಶಂಕರ್, ಹರಿಪ್ರಸಾದ್, ಪೂಜಾ,ರಾಜೇಶ್ ಎಸ್,ರಾಜಶೇಖರ್, ಗಸ್ತು ಅರಣ್ಯ ಪಾಲಕರಾದ ರಾಘವೇಂದ್ರ, ಪಾಂಡುರಂಗ ಕಮತಿ, ಪರಮೇಶ್ವರ್, ಸಂತೋಷ್ ,ಶರತ್, ಅಖಿಲೇಶ್, ಸತೀಶ್, ಸದಾನಂದ್,ಗಪೂರ್, ಪ್ರದೀಪ್ ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು. ಸುಮಾರು 10ಹೆಕ್ಟೇರ್ ಪ್ರದೇಶದಲ್ಲಿ 125ಮಂದಿ ಶಾಲಾ ಮಕ್ಕಳ ಸಹಕಾರದಲ್ಲಿ ಬಿತ್ತೋತ್ಸವ ನಡೆಯಿತು.

Related posts

ನಡ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ಕಳೆಂಜ : ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡ ನಿಧನ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya
error: Content is protected !!