22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

ಬೆಳ್ತಂಗಡಿ ಅರಣ್ಯ ಇಲಾಖೆ, ವಾಣಿ ಶಾಲೆ ಬೆಳ್ತಂಗಡಿ, ಸೈಂಟ್ ಮೇರಿಸ್ ಶಾಲೆ ಲಾಯಿಲ, ಸರಕಾರಿ ಪ್ರಾಥಮಿಕ ಶಾಲೆ ಪಡ್ಲಾಡಿ ಇವುಗಳ ಆಶ್ರಯದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಲಾಯಿಲ ಅರಣ್ಯ ಪ್ರದೇಶದಲ್ಲಿ ಜೂ.10 ರಂದು ನಡೆಸಲಾಯಿತು.

ಲಾಯಿಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಆಶಾ ಸಾಲ್ದಾನ ಕಾರ್ಯಕ್ರಮ ಉದ್ಘಾಟಿಸಿದರು.

ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಮಾತನಾಡಿ “ಸಾರ್ವಜನಿಕರು ತಾವು ಉಪಯೋಗಿಸುವ ಯಾವುದೇ ಫಲಗಳ ಬೀಜಗಳನ್ನು ಬಿಸಾಡದೇ ಸಂರಕ್ಷಿಸಿ ಗಿಡಮಾಡಿ ಬೆಳೆಸಬೇಕು. ಮಕ್ಕಳಿಗೆ ಭೌತಿಕ ಮತ್ತು ಭೌಗೋಳಿಕ ಅರಣ್ಯದ ಕುರಿತು ಮಾಹಿತಿಯನ್ನು ನೀಡಿ ಅರಣ್ಯ ಸಂರಕ್ಷಣೆಯ ಬಗ್ಗೆ ಎಳವೆಯಿಂದಲೆ ಅರಿವು ಮೂಡಿಸಬೇಕು. ಸಸ್ಯಾಹಾರಿ ಮತ್ತು ಮಾಂಸಾಹಾರಿ ಪ್ರಾಣಿಗಳು ಇರುವ ಅರಣ್ಯ ಪ್ರದೇಶ ಪ್ರಕೃತಿಯ ಸಮತೋಲನಕ್ಕೆ ಕಾರಣವಾಗುತ್ತದೆ” ಎಂದು ಹೇಳಿದರು.


ಲಾಯಿಲದ ಸ್ನೇಕ್ ಅಶೋಕ್, ಆರ್‌ ಎಫ್ ಒ ತ್ಯಾಗರಾಜ್, ಡಿಆರ್ ಎಫ್ ಒ ಗಳಾದ ರವೀಂದ್ರ ಕೆ, ಯತೀಂದ್ರ, ರವೀಂದ್ರ ಅಂಕಲಗಿ, ಭವಾನಿ ಶಂಕರ್, ಹರಿಪ್ರಸಾದ್, ಪೂಜಾ,ರಾಜೇಶ್ ಎಸ್,ರಾಜಶೇಖರ್, ಗಸ್ತು ಅರಣ್ಯ ಪಾಲಕರಾದ ರಾಘವೇಂದ್ರ, ಪಾಂಡುರಂಗ ಕಮತಿ, ಪರಮೇಶ್ವರ್, ಸಂತೋಷ್ ,ಶರತ್, ಅಖಿಲೇಶ್, ಸತೀಶ್, ಸದಾನಂದ್,ಗಪೂರ್, ಪ್ರದೀಪ್ ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು. ಸುಮಾರು 10ಹೆಕ್ಟೇರ್ ಪ್ರದೇಶದಲ್ಲಿ 125ಮಂದಿ ಶಾಲಾ ಮಕ್ಕಳ ಸಹಕಾರದಲ್ಲಿ ಬಿತ್ತೋತ್ಸವ ನಡೆಯಿತು.

Related posts

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya

ಮಂಗಳೂರು ಪಟ್ಲ ಫೌಂಡೇಶನ್ ಹವ್ಯಾಸಿ ಘಟಕದಿಂದ ತಾಳಮದ್ದಳೆ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya
error: Content is protected !!