32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

ಬೆಳ್ತಂಗಡಿ: ಎಂಡೋಸಲ್ಫಾನ್ ಮಹಾಮಾರಿಯಿಂದಾಗಿ ಚಿಕ್ಕಿಂದಿನಿಂದಲೇ ದೃಷ್ಟಿ ಕಳೆದುಕೊಂಡರೂ ತನ್ನ ಒಳದೃಷ್ಟಿಯಿಂದಲೇ ಇಡೀ ಊರಿನ ಜನರ ಪರವಾಗಿ ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರಾದ ಕೊಕ್ಕಡ ನಿವಾಸಿ ಶ್ರೀಧರ ಗೌಡ ಕೆಂಗುಡೇಲು ರವರು ವಿಜಯಕರ್ನಾಟಕ ದೈನಿಕ ನೀಡುವ “ವಿಕ ಹಿರೋಸ್” ಎಂಬ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದ್ದಾರೆ.

ಕೊಕ್ಕಡ ಎಂಬ ಪುಟ್ಟ ಊರಿನಲ್ಲಿ ಎಂಡೋ ಸಲ್ಫಾನ್ ಬಾಧೆಯಿಂದ 300ಕ್ಕೂ ಅಧಿಕ ಮಂದಿ ನರಕಯಾತನೆ ಅನುಭವಿಸುತ್ತಿದ್ದು, ಅವರಿಗಾಗಿ ಸ್ವತಃ ಎಂಡೋ ಸಂತ್ರಸ್ತನಾಗಿ ಹೋರಾಟಕ್ಕೆ ಧುಮುಕಿದರು. ಇವರು ಮೊದಲು ಹೋರಾಟಕ್ಕೆ ಇಳಿದಿದ್ದು ಉಪ್ಪಾರವಳಿಕೆ ಹಿರಿಯ ಪ್ರಾಥಮಿಕ ಶಾಲೆಗಾಗಿ, ಆ ಬಳಿಕ ಸೇತುವೆ, ವಿದ್ಯುತ್‌, ಆರೋಗ್ಯ ಸೌಲಭ್ಯ, ಬಸ್ ಸೇರಿದಂತೆ, ಅನೇಕ ಬೇಡಿಕೆಗಳಿಗೆ ಸಂಘಟಿತರಾಗಿ ಹೋರಾಟಕ್ಕೆ ಧುಮುಕಿದರು 1980ರಿಂದ 2000ದ ವರೆಗೆ ಸರಕಾರಿ ಗೇರುತೋಪುಗಳಿಗೆ ಸಿಂಪಡಿಸಿದ ಎಂಡೋಸಲ್ಫಾನ್ ನಿಂದಾಗಿ ಕೊಕ್ಕಡ ಹಾಗೂ ಅದರ ಪಕ್ಕದ ನಿಡ್ಲೆ ಹಾಗೂ ಪಟ್ರಮೆ ಗ್ರಾಮದ ಜನರ ಜೀವನ ನರಕ ಸದೃಶವಾಗಿತ್ತು. ಆರಂಭದಲ್ಲಿ ಯಾರೂ ಈ ಬಗ್ಗೆ ಗಂಭೀರವಾಗಿ ಯೋಚಿಸಿದೆ ಇದ್ದಾಗ ಶ್ರೀಧರ ಗೌಡ ಮುಂಚೂಣಿಯಲ್ಲಿ ನಿಂತು ಹೋರಾಟಕ್ಕೆ ಇಳಿದರು.

ಎಂಡೋ ಸಂತ್ರಸ್ತರಿಗೆ ಮಾಸಾಶನ, ಆರೋಗ್ಯ ಕಾರ್ಡ್, ಪಾಲನಾ ಕೇಂದ್ರ, ಉಚಿತ ಬಸ್ ಪಾಸ್, ಶಿಕ್ಷಣ ಸೇರಿದಂತೆ ವಿವಿಧ ಹೋರಾಟ ನಡೆಸಿ ಭಾಗಶಃ ಯಶಸ್ಸು ಕಂಡರು. ‘ಶ್ರೀಧರ ಗೌಡರ ಹೋರಾಟ ಕೇವಲ ಕೊಕ್ಕಡ ಹೋಬಳಿಗೆ ಮಾ ವಾಗಿರಲಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆ ಸೇರಿದ ಜಿಲ್ಲೆಯ ಎಂಟೂವರೆ ಸಾವಿರ ಎಂಡೋಸಲ್ಫಾನ್ ಸಂತ್ರಸ್ತರಿಗೆ ನ್ಯಾಯ ಕೊಡುವಲ್ಲಿ ಸಫಲರಾಗಿದ್ದಾರೆ.

ಇವರ ಈ ವಿಶೇಷ ಸೇವೆಯನ್ನು ಗುರುತಿಸಿ ಕರ್ನಾಟಕದ ಹೆಮ್ಮೆಯ ದಿನಪತ್ರಿಕೆ ವಿಜಯಕರ್ನಾಟಕ ದೈನಿಕವು “ವಿಕ ಹಿರೋಸ್” ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Related posts

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya
error: Content is protected !!