23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

ಬೆಳ್ತಂಗಡಿ: ಎಂಡೋಸಲ್ಫಾನ್ ಮಹಾಮಾರಿಯಿಂದಾಗಿ ಚಿಕ್ಕಿಂದಿನಿಂದಲೇ ದೃಷ್ಟಿ ಕಳೆದುಕೊಂಡರೂ ತನ್ನ ಒಳದೃಷ್ಟಿಯಿಂದಲೇ ಇಡೀ ಊರಿನ ಜನರ ಪರವಾಗಿ ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರಾದ ಕೊಕ್ಕಡ ನಿವಾಸಿ ಶ್ರೀಧರ ಗೌಡ ಕೆಂಗುಡೇಲು ರವರು ವಿಜಯಕರ್ನಾಟಕ ದೈನಿಕ ನೀಡುವ “ವಿಕ ಹಿರೋಸ್” ಎಂಬ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದ್ದಾರೆ.

ಕೊಕ್ಕಡ ಎಂಬ ಪುಟ್ಟ ಊರಿನಲ್ಲಿ ಎಂಡೋ ಸಲ್ಫಾನ್ ಬಾಧೆಯಿಂದ 300ಕ್ಕೂ ಅಧಿಕ ಮಂದಿ ನರಕಯಾತನೆ ಅನುಭವಿಸುತ್ತಿದ್ದು, ಅವರಿಗಾಗಿ ಸ್ವತಃ ಎಂಡೋ ಸಂತ್ರಸ್ತನಾಗಿ ಹೋರಾಟಕ್ಕೆ ಧುಮುಕಿದರು. ಇವರು ಮೊದಲು ಹೋರಾಟಕ್ಕೆ ಇಳಿದಿದ್ದು ಉಪ್ಪಾರವಳಿಕೆ ಹಿರಿಯ ಪ್ರಾಥಮಿಕ ಶಾಲೆಗಾಗಿ, ಆ ಬಳಿಕ ಸೇತುವೆ, ವಿದ್ಯುತ್‌, ಆರೋಗ್ಯ ಸೌಲಭ್ಯ, ಬಸ್ ಸೇರಿದಂತೆ, ಅನೇಕ ಬೇಡಿಕೆಗಳಿಗೆ ಸಂಘಟಿತರಾಗಿ ಹೋರಾಟಕ್ಕೆ ಧುಮುಕಿದರು 1980ರಿಂದ 2000ದ ವರೆಗೆ ಸರಕಾರಿ ಗೇರುತೋಪುಗಳಿಗೆ ಸಿಂಪಡಿಸಿದ ಎಂಡೋಸಲ್ಫಾನ್ ನಿಂದಾಗಿ ಕೊಕ್ಕಡ ಹಾಗೂ ಅದರ ಪಕ್ಕದ ನಿಡ್ಲೆ ಹಾಗೂ ಪಟ್ರಮೆ ಗ್ರಾಮದ ಜನರ ಜೀವನ ನರಕ ಸದೃಶವಾಗಿತ್ತು. ಆರಂಭದಲ್ಲಿ ಯಾರೂ ಈ ಬಗ್ಗೆ ಗಂಭೀರವಾಗಿ ಯೋಚಿಸಿದೆ ಇದ್ದಾಗ ಶ್ರೀಧರ ಗೌಡ ಮುಂಚೂಣಿಯಲ್ಲಿ ನಿಂತು ಹೋರಾಟಕ್ಕೆ ಇಳಿದರು.

ಎಂಡೋ ಸಂತ್ರಸ್ತರಿಗೆ ಮಾಸಾಶನ, ಆರೋಗ್ಯ ಕಾರ್ಡ್, ಪಾಲನಾ ಕೇಂದ್ರ, ಉಚಿತ ಬಸ್ ಪಾಸ್, ಶಿಕ್ಷಣ ಸೇರಿದಂತೆ ವಿವಿಧ ಹೋರಾಟ ನಡೆಸಿ ಭಾಗಶಃ ಯಶಸ್ಸು ಕಂಡರು. ‘ಶ್ರೀಧರ ಗೌಡರ ಹೋರಾಟ ಕೇವಲ ಕೊಕ್ಕಡ ಹೋಬಳಿಗೆ ಮಾ ವಾಗಿರಲಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆ ಸೇರಿದ ಜಿಲ್ಲೆಯ ಎಂಟೂವರೆ ಸಾವಿರ ಎಂಡೋಸಲ್ಫಾನ್ ಸಂತ್ರಸ್ತರಿಗೆ ನ್ಯಾಯ ಕೊಡುವಲ್ಲಿ ಸಫಲರಾಗಿದ್ದಾರೆ.

ಇವರ ಈ ವಿಶೇಷ ಸೇವೆಯನ್ನು ಗುರುತಿಸಿ ಕರ್ನಾಟಕದ ಹೆಮ್ಮೆಯ ದಿನಪತ್ರಿಕೆ ವಿಜಯಕರ್ನಾಟಕ ದೈನಿಕವು “ವಿಕ ಹಿರೋಸ್” ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Related posts

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya
error: Content is protected !!