23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

ಉಜಿರೆ, ಜೂ.9: ಮಾನವತೆಯ ಸೇವೆ ಮಾಡುವುದು ಮಾನವ ಬದುಕಿನ ಅತ್ಯುತ್ತಮ ಕಾರ್ಯವಾಗಿದ್ದು, ಅದನ್ನು ಧ್ಯೇಯವಾಗಿರಿಸಿಕೊಂಡಿರುವ ಸ್ಕೌಟ್ಸ್ ಗೈಡ್ಸ್ ನ ಕಾರ್ಯ ಸ್ತುತ್ಯರ್ಹ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಭಿಪ್ರಾಯಪಟ್ಟರು.

ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ (ಸ್ಕೌಟ್ಸ್ & ಗೈಡ್ಸ್ ಹಿರಿಯ ವಿಭಾಗ) ಘಟಕವು ಇಂದು (ಜೂ.9) ಆಯೋಜಿಸಿದ್ದ ಒಂದು ದಿನದ ‘ರೋವರ್ಸ್ & ರೇಂಜರ್ಸ್ ಸಂಬಂಧಿತ ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ಗಳ ಉದ್ಘಾಟನ ಸಮಾರಂಭ ‘ಪ್ರಮುಕ 23’ ದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮನುಷ್ಯರಿಗೆ ಸಹಾಯ ಮಾಡಿದವರನ್ನು ಇತಿಹಾಸ ಸ್ಮರಿಸುತ್ತದೆ. ಗಾಂಧೀಜಿ, ವಿವೇಕಾನಂದರಂತಹ ಮಹಾತ್ಮರ ತ್ಯಾಗ, ಸಮರ್ಪಣೆ, ಸಂಯಮ, ಸರಳತೆ ಹಾಗೂ ಅವರು ಮಾನವತೆಗೆ ಮಾಡಿದ ಕಾರ್ಯಗಳನ್ನು ಚರಿತ್ರೆ ಸ್ಮರಿಸುತ್ತದೆ. ಮಾನವತೆಗೆ ಸಹಾಯ ಮಾಡುವುದು ಶ್ರೇಷ್ಠ ಕಾರ್ಯವಾಗಿದ್ದು, ಅದನ್ನು ಸ್ಕೌಟಿಂಗ್ ಮಾಡುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಾರತ್ ಸ್ಕೌಟ್ಸ್ & ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತ (ಎಎಸ್ಒಸಿ) ಭರತ್ ರಾಜ್ ಕೆ. ಅವರು, “3 ವರ್ಷದ ಮಗುವಿನಿಂದ ಹಿಡಿದು ಯುವಕರವರೆಗೆ ಸ್ಕೌಟ್ಸ್ & ಗೈಡ್ಸ್ ಸಂಸ್ಥೆ ವ್ಯಕ್ತಿತ್ವಗಳನ್ನು ಬೆಳೆಸುತ್ತದೆ. ಜಿಲ್ಲೆಯಲ್ಲಿ ಸಂಸ್ಥೆಯು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಎಸ್.ಡಿ.ಎಂ. ಕಾಲೇಜಿನ ಘಟಕವು ಸಂಸ್ಥೆಯ ಚಟುವಟಿಕೆಗಳಲ್ಲಿ ಅತ್ಯುತ್ತಮ ರೀತಿಯಲ್ಲಿ ತೊಡಗಿಕೊಳ್ಳುತ್ತಿದೆ” ಎಂದರು.

ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕದ ರೇಂಜರ್ ಲೀಡರ್ ಆಗಿ ಕರ್ತವ್ಯ ನಿರ್ವಹಿಸಿದ್ದ (ನಿಕಟಪೂರ್ವ) ಕಾಲೇಜಿನ ವಾಣಿಜ್ಯ ವಿಭಾಗ ಮುಖ್ಯಸ್ಥೆ ಡಾ. ರತ್ನಾವತಿ ಕೆ. ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಹಿರಿಯ ರೋವರ್ ಹಾಗೂ ರೇಂಜರ್ ಗಳಿಗೆ ಕಾಲೇಜಿನ ವತಿಯಿಂದ ಪ್ರಮಾಣಪತ್ರ ವಿತರಿಸಲಾಯಿತು.

ಸ್ಕೌಟಿಂಗ್ ಕೌಶಲಗಳಿಗೆ ಸಂಬಂಧಿಸಿದಂತೆ ಆಯೋಜಿಸಲಾದ ವಸ್ತುಪ್ರದರ್ಶನ ಉದ್ಘಾಟನೆಗೊಂಡಿತು. ಸ್ಕೌಟಿಂಗ್ ನಲ್ಲಿ ಬಳಸುವ ಫ್ಲ್ಯಾಗ್ ಫಾರ್ಮೇಶನ್, ಸಿಗ್ನಲಿಂಗ್, ಶಿಬಿರ, ವಸ್ತುಗಳ ಎತ್ತರ- ಅಳತೆ ಅಂದಾಜು, ಸಾಹಸಮಯ ಚಟುವಟಿಕೆಗಳು ಇತ್ಯಾದಿಗಳ ಪ್ರತಿಕೃತಿಗಳು, ಮಂಗಳೂರಿನ ಸ್ಕೌಟ್ಸ್& ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದ ಪ್ರತಿಕೃತಿ, ವಿವಿಧ ಬಗೆಯ ಬ್ಯಾಜ್ ಹಾಗೂ ಸ್ಕಾರ್ಫ್, ಗಂಟುಗಳು (ನಾಟ್ಸ್), ಸಮವಸ್ತ್ರಗಳನ್ನು ಪ್ರದರ್ಶಿಸಲಾಗಿತ್ತು.

ಕಾಲೇಜಿನ ವಿದ್ಯಾರ್ಥಿಗಳಿಗೆ 6 ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ರೋವರ್ಸ್ & ರೇಂಜರ್ಸ್ ಘಟಕದ ರೋವರ್ ಸ್ಕೌಟ್ ಲೀಡರ್ (RSL) ಪ್ರಸಾದ್ ಕುಮಾರ್ ಪ್ರಸ್ತಾವಿಸಿ, ಸ್ವಾಗತಿಸಿದರು. ರೇಂಜರ್ ಲೀಡರ್ (RL) ಗಾನವಿ ವಂದಿಸಿದರು. ರೇಂಜರ್ ಗಳಾದ ರಕ್ಷಾ ಮತ್ತು ತಂಡದವರು ಪ್ರಾರ್ಥಿಸಿ, ಪುಣ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನ 9ನೇ ಸ್ವಚ್ಛ ಭಾರತ್ ಸ್ವಚ್ಛತಾ ಕಾರ್ಯಕ್ರಮ: ಮುಂದಿನ ಪೀಳಿಗೆಗೆ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ: ಡಾ. ಎಸ್.ಆರ್. ಹರೀಶ್ ಆಚಾರ್ಯ

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya
error: Content is protected !!