24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್‍ಸ್-ರೇಂಜರ್‍ಸ್ ಘಟಕ ಯುವರೆಡ್ ಕ್ರಾಸ್ ಘಟಕ ಹಾಗೂ ಎನ್‌ಸಿಸಿ ಇವುಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಆವರಣವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಿಸಲು ಪ್ರತಿಜ್ಞೆ, ಮಾಡಲಾಯಿತು.

ಕಾಲೇಜಿನ ಆವರಣದಲ್ಲಿ ಪ್ರಾಂಶುಪಾಲರಾದ ಡಾ.ಸುಬ್ರಹ್ಮಣ್ಯ ಕೆ. ಇವರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಗ್ರಂಥಪಾಲಕರಾದ ಪ್ರೊ. ಜಗದೀಶ್ ಎಸ್ ಇವರು ವಿಶ್ವ ಪರಿಸರ ದಿನಾಚರಣೆಯ ಆಶಯ ಪ್ಲಾಸ್ಟಿಕ್ ಮುಕ್ತ ಎಂಬ ವಿಷಯದ ಬಗ್ಗೆ ಮಾತನಾಡಿದರು.

ಪರಿಸರ ದಿನಾಚರಣೆಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಎಂಬ ವಿಷಯದ ಮೇಲೆ ಭಾಷಣ ಸ್ವರ್ಧೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯ ಸ್ವಾಗತಿಸಿದರು, ರೋವರ್ ಸ್ಕೌಟ್ ಲೀಡರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ರವಿ ಎಂ.ಎನ್. ಪ್ರಸ್ತಾವನೆಗೈದರು. ರೇಂಜರ್ ಲೀಡರ್ ಪ್ರೊ. ರಾಜೇಶ್ವರಿ ಹೆಚ್.ಎಸ್ ವಂದಿಸಿದರು, ಎನ್‌ಸಿಸಿ ಅಧಿಕಾರಿ ಡಾ. ಶೈಲೇಶ್ ಕುಮಾರ್ ಡಿ ಹೆಚ್ ಉಪಸ್ಥಿತರಿದ್ದರು.

Related posts

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya
error: Content is protected !!