25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆ ರೋವರ್‍ಸ್ ಮತ್ತು ರೇಂಜರ್‍ಸ್ ಐ.ಕ್ಯೂ.ಎ.ಸಿ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಗುರುವಾಯನಕೆರೆ ವಲಯ ಇವರ ಸಹಯೋಗದೊಂದಿಗೆ ವಿಶ್ವ ತಂಬಾಕು ವಿರೋಧಿ ದಿನವನ್ನು ಆಚರಿಸಲಾಯಿತು.

ಶ್ರೀಮತಿ ಶಾರದಾ ರೈ ಅಧ್ಯಕ್ಷರು, ತಾಲೂಕು ಜನ ಜಾಗೃತಿ ವೇದಿಕೆ ಇವರು ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಯುವ ಜನತೆ ಮಾದಕ ವ್ಯಸನಗಳಿಂದ ದೂರವಿರಲು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾದ ಗಣೇಶ್ ಆಚಾರಿ ಯೋಜನಾಧಿಕಾರಿಗಳು, ಉಡುಪಿ ಪ್ರಾದೇಶಿಕ ವಿಭಾಗ ಜನಜಾಗೃತಿ ವೇದಿಕೆ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಯುವ ಜನತೆಯನ್ನು ಡಿಎಡಿಕ್ಸನ್ ಕೇಂದ್ರಗಳಿಗೆ ಬರುವುದನ್ನು ತಡೆಯುವುದು ಈ ಜಾಗೃತಿ ಕಾರ್ಯಕ್ರಮದ ಉದ್ದೇಶ ಎಂದರು. ಆರೋಗ್ಯ ಪೂರ್ಣ ಜೀವನ ಪದ್ಧತಿಯನ್ನು ಬೆಳೆಸುವುದು ಈ ದಿನದ ಅಗತ್ಯವೆಂದರು.

ದಯಾನಂದ್ ಪೂಜಾರಿ , ಯೋಜನಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಇವರು ಪ್ರಸ್ತಾವಿಕವಾಗಿ ಮಾತನಾಡಿ ಸಾಮಾಜಿಕ ಹಾಗೂ ಆರ್ಥಿಕ ಪರಿವರ್ತನೆ ಜನ ಜಾಗೃತಿ ಉದ್ಧೇಶವೆಂದರು. ಕಿಶೋರ್ ಹೆಗ್ಡೆ, ನಿಕಟಪೂರ್ವ ಅಧ್ಯಕ್ಷರ ಜನ ಜಾಗೃತಿ ವೇದಿಕೆ ಬೆಳೆದು ಬಂದ ರೀತಿ, ಅದರ ಸಾಧನೆ ಬಗ್ಗೆ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಸದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಕೆ. ಇವರು ಯುವ ಜನತೆ ಶಿಕ್ಷಣ ಪಡೆದು ವಿವೇಕ ಜಾಗೃತಿಗೊಳ್ಳಬೇಕೆಂದರು. ಅಚ್ಚ್ಯತ ಕುಮಾರ್ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಡಾ. ರವಿ ಎಂ. ಎನ್. ಸ್ನಾತಕೋತ್ತರ ವಿಭಾಗದ ಸಂಚಾಲಕರು. ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯ ರಾ.ಸೇ.ಯೋಜನಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಸಂಘಟಿಸಿದರು. ಸುರೇಶ್ ಡಿ, ಆಂಗ್ಲಭಾಷಾ ಉಪನ್ಯಾಸಕರು ಸಹಕರಿಸಿದರು. ಕು.ಮಾಲಾತಿ ಹಾಗೂ ಬಳಗ ಪ್ರಥಮ ಬಿ.ಎ ಪ್ರಾರ್ಥಿಸಿದರು. ಕು ಸ್ನೇಹಾ ಸ್ವಾಗತಿಸಿದರು. ಕು ಪ್ರತಿಕ್ಷಾ ಪ್ರಥಮ ಬಿ.ಬಿ.ಎ ವಂದಿಸಿದರು, ಕು.ಉಮಾವತಿ ಪ್ರಥಮ ಬಿ.ಎ ನಿರೂಪಿಸಿದರು.

Related posts

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

Suddi Udaya
error: Content is protected !!