26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್‍ಸ್-ರೇಂಜರ್‍ಸ್ ಘಟಕ ಯುವರೆಡ್ ಕ್ರಾಸ್ ಘಟಕ ಹಾಗೂ ಎನ್‌ಸಿಸಿ ಇವುಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಆವರಣವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಿಸಲು ಪ್ರತಿಜ್ಞೆ, ಮಾಡಲಾಯಿತು.

ಕಾಲೇಜಿನ ಆವರಣದಲ್ಲಿ ಪ್ರಾಂಶುಪಾಲರಾದ ಡಾ.ಸುಬ್ರಹ್ಮಣ್ಯ ಕೆ. ಇವರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಗ್ರಂಥಪಾಲಕರಾದ ಪ್ರೊ. ಜಗದೀಶ್ ಎಸ್ ಇವರು ವಿಶ್ವ ಪರಿಸರ ದಿನಾಚರಣೆಯ ಆಶಯ ಪ್ಲಾಸ್ಟಿಕ್ ಮುಕ್ತ ಎಂಬ ವಿಷಯದ ಬಗ್ಗೆ ಮಾತನಾಡಿದರು.

ಪರಿಸರ ದಿನಾಚರಣೆಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಎಂಬ ವಿಷಯದ ಮೇಲೆ ಭಾಷಣ ಸ್ವರ್ಧೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯ ಸ್ವಾಗತಿಸಿದರು, ರೋವರ್ ಸ್ಕೌಟ್ ಲೀಡರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ರವಿ ಎಂ.ಎನ್. ಪ್ರಸ್ತಾವನೆಗೈದರು. ರೇಂಜರ್ ಲೀಡರ್ ಪ್ರೊ. ರಾಜೇಶ್ವರಿ ಹೆಚ್.ಎಸ್ ವಂದಿಸಿದರು, ಎನ್‌ಸಿಸಿ ಅಧಿಕಾರಿ ಡಾ. ಶೈಲೇಶ್ ಕುಮಾರ್ ಡಿ ಹೆಚ್ ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya
error: Content is protected !!