July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್‍ಸ್-ರೇಂಜರ್‍ಸ್ ಘಟಕ ಯುವರೆಡ್ ಕ್ರಾಸ್ ಘಟಕ ಹಾಗೂ ಎನ್‌ಸಿಸಿ ಇವುಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಆವರಣವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಿಸಲು ಪ್ರತಿಜ್ಞೆ, ಮಾಡಲಾಯಿತು.

ಕಾಲೇಜಿನ ಆವರಣದಲ್ಲಿ ಪ್ರಾಂಶುಪಾಲರಾದ ಡಾ.ಸುಬ್ರಹ್ಮಣ್ಯ ಕೆ. ಇವರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಗ್ರಂಥಪಾಲಕರಾದ ಪ್ರೊ. ಜಗದೀಶ್ ಎಸ್ ಇವರು ವಿಶ್ವ ಪರಿಸರ ದಿನಾಚರಣೆಯ ಆಶಯ ಪ್ಲಾಸ್ಟಿಕ್ ಮುಕ್ತ ಎಂಬ ವಿಷಯದ ಬಗ್ಗೆ ಮಾತನಾಡಿದರು.

ಪರಿಸರ ದಿನಾಚರಣೆಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಎಂಬ ವಿಷಯದ ಮೇಲೆ ಭಾಷಣ ಸ್ವರ್ಧೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯ ಸ್ವಾಗತಿಸಿದರು, ರೋವರ್ ಸ್ಕೌಟ್ ಲೀಡರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ರವಿ ಎಂ.ಎನ್. ಪ್ರಸ್ತಾವನೆಗೈದರು. ರೇಂಜರ್ ಲೀಡರ್ ಪ್ರೊ. ರಾಜೇಶ್ವರಿ ಹೆಚ್.ಎಸ್ ವಂದಿಸಿದರು, ಎನ್‌ಸಿಸಿ ಅಧಿಕಾರಿ ಡಾ. ಶೈಲೇಶ್ ಕುಮಾರ್ ಡಿ ಹೆಚ್ ಉಪಸ್ಥಿತರಿದ್ದರು.

Related posts

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya
error: Content is protected !!