September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

ನಡ: ಸರಕಾರಿ ಪ್ರೌಢಶಾಲೆ ನಡ ಇದರ ಶಾಲಾ ಸಂಸತ್ತಿನ ಚುನಾವಣೆಯಲ್ಲಿ ಶಾಲಾ ನಾಯಕಿಯಾಗಿ ಕುಮಾರಿ ಇಂಚಿತಾ 9ನೇ ತರಗತಿ, ಹಾಗೂ ಉಪ ನಾಯಕನಾಗಿ 8 ನೇ ತರಗತಿಯ ಹೃತಿಕ್ ಆಯ್ಕೆಯಾಗಿರುತ್ತಾರೆ. ಸಾರ್ವತ್ರಿಕ ಮತದಾನದಲ್ಲಿ ಸದಸ್ಯರನ್ನು ಚುನಾವಣೆಯ ಮೂಲಕ ಆಯ್ಕೆ ಮಾಡುವ ಪ್ರಕ್ರಿಯೆಯ ಅರಿವು ಮಕ್ಕಳಲ್ಲಿ ಮೂಡಿಸುವ ಉದ್ದೇಶದಿಂದ, ಪೂರ್ತಿ ಮತದಾನವನ್ನು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿಯೇ ನಡೆಸಲಾಗಿತ್ತು.

ಶಾಲಾ ನಾಯಕ/ ಉಪನಾಯಕ ಮಾತ್ರವಲ್ಲದೆ ಉಳಿದ ಸ್ಥಾನಗಳಿಗೂ ಚುನಾವಣೆ ನಡೆಸಲಾಗಿದ್ದು ಕೃಷಿಮಂತ್ರಿಯಾಗಿ 9ನೇ ತರಗತಿಯ ಧನುಷ್,ಕ್ರೀಡಾ ಮಂತ್ರಿಯಾಗಿ 8ನೇ ತರಗತಿಯ ಪ್ರಮಿತ್, ಆರೋಗ್ಯ ಮತ್ತು ಸ್ವಚ್ಛತಾ ಮಂತ್ರಿಯಾಗಿ 9ನೇ ತರಗತಿಯ ಅಪೇಕ್ಷಾ, ಆಹಾರ ಮಂತ್ರಿಯಾಗಿ 9ನೇ ತರಗತಿಯ ಫಾತಿಮತ್ ರಾಫಿಯಾ, ನೀರಾವರಿ ಮತ್ತು ತೋಟಗಾರಿಕಾ ಮಂತ್ರಿಯಾಗಿ 9ನೇ ತರಗತಿ ಮನೀಷ್, ಶಿಕ್ಷಣ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ 9ನೇ ತರಗತಿಯ ಧನ್ಯಶ್ರೀ ಹಾಗೂ ಗೃಹ ಮಂತ್ರಿಯಾಗಿ 9 ನೇ ತರಗತಿ ಅಕ್ಷತ್ ಚುನಾವಣೆಯ ಮೂಲಕ ಆಯ್ಕೆಗೊಂಡರು. ಸಮಾಜ ವಿಜ್ಞಾನ ಶಿಕ್ಷಕ ಶಿವಪುತ್ರ ಸುಣಗಾರ ಚುನಾವಣಾಧಿಕಾರಿಯಾಗಿ ಚುನಾವಣೆಯನ್ನು ನಡೆಸಿಕೊಟ್ಟರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ವಿಜಯ ಕ್ರೆಡಿಟ್ ಕೋ‌ ಅಪರೇಟೀವ್ ಸೊಸೈಟಿ ಬೆಳ್ತಂಗಡಿ ರೂ.1,848 ಕೋಟಿ ವಾಷಿ೯ಕ ವ್ಯವಹಾರ: ರೂ.5 ಕೋಟಿ ರೂ ನಿವ್ವಳ ಲಾಭ

Suddi Udaya

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya
error: Content is protected !!