ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ, ಬೃಹತ್ ರಕ್ತದಾನ ಶಿಬಿರವು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಜೂ.11 ರಂದು ಸೋಮನಾಥೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವಾರಾಮ್ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಡಾ.ಶಶಿಧರ ಡೋಂಗ್ರೆ, ಕೆ ಎಂ ಸಿ ಅತ್ತವಾರ ಆಸ್ಪತ್ರೆಯ ಡಾ| ಆತ್ಮಾನಂದ ಎಸ್ ಹೆಗ್ಡೆ, ನಾರಾವಿ ಅನಂತ್ ಕ್ಲಿನಿಕ್ ನಾ ಡಾ| ಶೀತಲ್ ಕುಮಾರ್,ಡಾ| ಸುಷ್ಮಾ ಎಸ್ ಡೊಂಗ್ರೆ, ನಾಟಿ ವೈದ್ಯ ಬೇಬಿ ಪೂಜಾರಿ ಪುಣ್ಯತ್ತಾರು, ಡಾ | ಸೌಪರ್ಣಿಕಾ ಪಿಲ್ಯ, ರೆಡ್ ಕ್ರಾಸ್ ಮಂಗಳೂರಿನ ಪ್ರವಿಣ್, ಡಾ | ದಿಶಾ ಪಿಲ್ಯ ಉಪಸ್ಥಿತರಿದ್ದರು.

Leave a Comment

error: Content is protected !!