ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ವತಿಯಿಂದ 20 ನೇ ವರ್ಷದ ಉಚಿತ ಪುಸ್ತಕ ವಿತರಣೆ , ಪ್ರತಿಭಾ ಪುರಸ್ಕಾರ, ನಿವೃತ್ತ ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮ ಜೂ.11 ರಂದು ಸೋಮನಾಥೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿದರು. ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ. ವಸಂತ ಬಂಗೇರ ಅತಿಥಿಗಳಾಗಿ ಭಾಗವಹಿಸಿದ್ದರು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲ, ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ಅಧ್ಯಕ್ಷತೆ ವಹಿಸಿದ್ದರು.

ಕಾಯ೯ಕ್ರಮದಲ್ಲಿ ದೇಶ ಸೇವೆ ಗೈದು ನಿವೃತ್ತ ವೀರ ಯೋಧರಾದ ಉಮೇಶ್ ಮಾಲಾಡಿ ಹಾಗೂ ಉಮೇಶ್ ಬಂಗೇರನ್ನು ಸನ್ಮಾನಿಸಲಾಯಿತು. ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿದ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಬೆಳ್ತಂಗಡಿ ವಿದ್ಯಾರ್ಥಿ ಅಭಿಷೇಕ್ ಎಂ.ವಿ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ | ಪದ್ಮಪ್ರಸಾದ್ ಅಜಿಲರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಕೆ ವಸಂತ ಬಂಗೇರ, ಸಮಾಜ ಸೇವಕ ರವಿ ಕಟಪಾಡಿ, ಅಳದಂಗಡಿ ಗ್ರಾ.ಪಂ.ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್,ಶ್ರಿ ಸತ್ಯದೇವತೆ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.











