30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

ಮಲವಂತಿಗೆ: ಪ್ರತಿ ವರ್ಷದಂತೆ ಈ ವರ್ಷವೂ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಸ.ಹಿ.ಪ್ರಾ.ಶಾಲೆ ಕಜಕೆ 1ರಿಂದ7 ನೇ ತರಗತಿ ಮಕ್ಕಳಿಗೆ ಬರೆಯುವ ( ನೋಟ್) ಪುಸ್ತಕಗಳನ್ನು ಬೆಳ್ತಂಗಡಿಯ ನೋಟರಿ ವಕೀಲರಾದ ಮುರಳಿ. ಬಿ. ಇವರು ಹಾಗೂ ಇವರ ಕುಟುಂಬದವರು ಜೂನ್.10ರಂದು ಶಾಲೆಗೆ ಆಗಮಿಸಿ ಉಚಿತವಾಗಿ ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುರಳಿ.ಬಿ. ಅವರ ಧರ್ಮಪತ್ನಿ ಶ್ರೀಮತಿ ಮನೋರಮ, ಪುತ್ರರಾದ ಮಯೂರ್ ಹಾಗೂ ಮಂದಾರ, ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶೇಖರ ಗೌಡ ಕಜಕೆ, ಸಮಿತಿಯ ಸದಸ್ಯರಾದ ವೆಂಕಟೇಶ್ ಪ್ರಸಾದ್, ಸ್ಥಳೀಯರಾದ ವಸಂತ ಲೋಂಡೆ ಗುರಿಗದ್ದೆ ಇವರೆಲ್ಲರೂ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಪ್ರಾರ್ಥನೆ ನಂತರ ಶಾಲಾ ಸಹ ಶಿಕ್ಷಕರಾದ ರಂಗನಾಥ ಬಿ.ಕೆ. ಎಲ್ಲರನ್ನು ಸ್ವಾಗತಿಸಿ, ಮುಖ್ಯ ಶಿಕ್ಷಕರಾದ ಕುಮಾರಸ್ವಾಮಿ ಕೆ.ಎನ್. ವಂದಿಸಿದರು. ಶಾಲಾ ಸಹ ಶಿಕ್ಷಕರಾದ ಮಂಜುನಾಥ ಕಾರ್ಯಕ್ರಮವನ್ನು ನಿರೂಪಿಸಿ ಗೌರವ ಶಿಕ್ಷಕಿಯರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya
error: Content is protected !!