25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

ಮಲವಂತಿಗೆ: ಪ್ರತಿ ವರ್ಷದಂತೆ ಈ ವರ್ಷವೂ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಸ.ಹಿ.ಪ್ರಾ.ಶಾಲೆ ಕಜಕೆ 1ರಿಂದ7 ನೇ ತರಗತಿ ಮಕ್ಕಳಿಗೆ ಬರೆಯುವ ( ನೋಟ್) ಪುಸ್ತಕಗಳನ್ನು ಬೆಳ್ತಂಗಡಿಯ ನೋಟರಿ ವಕೀಲರಾದ ಮುರಳಿ. ಬಿ. ಇವರು ಹಾಗೂ ಇವರ ಕುಟುಂಬದವರು ಜೂನ್.10ರಂದು ಶಾಲೆಗೆ ಆಗಮಿಸಿ ಉಚಿತವಾಗಿ ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುರಳಿ.ಬಿ. ಅವರ ಧರ್ಮಪತ್ನಿ ಶ್ರೀಮತಿ ಮನೋರಮ, ಪುತ್ರರಾದ ಮಯೂರ್ ಹಾಗೂ ಮಂದಾರ, ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶೇಖರ ಗೌಡ ಕಜಕೆ, ಸಮಿತಿಯ ಸದಸ್ಯರಾದ ವೆಂಕಟೇಶ್ ಪ್ರಸಾದ್, ಸ್ಥಳೀಯರಾದ ವಸಂತ ಲೋಂಡೆ ಗುರಿಗದ್ದೆ ಇವರೆಲ್ಲರೂ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಪ್ರಾರ್ಥನೆ ನಂತರ ಶಾಲಾ ಸಹ ಶಿಕ್ಷಕರಾದ ರಂಗನಾಥ ಬಿ.ಕೆ. ಎಲ್ಲರನ್ನು ಸ್ವಾಗತಿಸಿ, ಮುಖ್ಯ ಶಿಕ್ಷಕರಾದ ಕುಮಾರಸ್ವಾಮಿ ಕೆ.ಎನ್. ವಂದಿಸಿದರು. ಶಾಲಾ ಸಹ ಶಿಕ್ಷಕರಾದ ಮಂಜುನಾಥ ಕಾರ್ಯಕ್ರಮವನ್ನು ನಿರೂಪಿಸಿ ಗೌರವ ಶಿಕ್ಷಕಿಯರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ವತಿಯಿಂದ ಅದ್ದೂರಿ ಪಿಲಿಏಸ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!