July 23, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

ಮಲವಂತಿಗೆ: ಪ್ರತಿ ವರ್ಷದಂತೆ ಈ ವರ್ಷವೂ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಸ.ಹಿ.ಪ್ರಾ.ಶಾಲೆ ಕಜಕೆ 1ರಿಂದ7 ನೇ ತರಗತಿ ಮಕ್ಕಳಿಗೆ ಬರೆಯುವ ( ನೋಟ್) ಪುಸ್ತಕಗಳನ್ನು ಬೆಳ್ತಂಗಡಿಯ ನೋಟರಿ ವಕೀಲರಾದ ಮುರಳಿ. ಬಿ. ಇವರು ಹಾಗೂ ಇವರ ಕುಟುಂಬದವರು ಜೂನ್.10ರಂದು ಶಾಲೆಗೆ ಆಗಮಿಸಿ ಉಚಿತವಾಗಿ ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುರಳಿ.ಬಿ. ಅವರ ಧರ್ಮಪತ್ನಿ ಶ್ರೀಮತಿ ಮನೋರಮ, ಪುತ್ರರಾದ ಮಯೂರ್ ಹಾಗೂ ಮಂದಾರ, ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶೇಖರ ಗೌಡ ಕಜಕೆ, ಸಮಿತಿಯ ಸದಸ್ಯರಾದ ವೆಂಕಟೇಶ್ ಪ್ರಸಾದ್, ಸ್ಥಳೀಯರಾದ ವಸಂತ ಲೋಂಡೆ ಗುರಿಗದ್ದೆ ಇವರೆಲ್ಲರೂ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಪ್ರಾರ್ಥನೆ ನಂತರ ಶಾಲಾ ಸಹ ಶಿಕ್ಷಕರಾದ ರಂಗನಾಥ ಬಿ.ಕೆ. ಎಲ್ಲರನ್ನು ಸ್ವಾಗತಿಸಿ, ಮುಖ್ಯ ಶಿಕ್ಷಕರಾದ ಕುಮಾರಸ್ವಾಮಿ ಕೆ.ಎನ್. ವಂದಿಸಿದರು. ಶಾಲಾ ಸಹ ಶಿಕ್ಷಕರಾದ ಮಂಜುನಾಥ ಕಾರ್ಯಕ್ರಮವನ್ನು ನಿರೂಪಿಸಿ ಗೌರವ ಶಿಕ್ಷಕಿಯರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!