25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣದ ಅವಕಾಶವಿರುವ ಮಹತ್ವದ ” ಶಕ್ತಿ “ಯೋಜನೆಗೆ ಜೂ 11 ರಂದು ಬೆಳ್ತಂಗಡಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಉಚಿತ ಟಿಕೆಟ್ ವಿತರಣೆಯ ಮೂಲಕ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದರು. . ಬೆಳ್ತಂಗಡಿ ಕೆ. ಎಸ್. ಆರ್ . ಟಿ. ಸಿ ಬಸ್ ನಿಲ್ದಾಣದಿಂದ ಸಾಂಕೇತಿಕವಾಗಿ ಹೊರಟ ಬಸ್ ಗುರುವಾಯನಕೆರೆವರೆಗೆ ಹೋಗಿ ವಾಪಾಸು ಬಂತು. ಬಳಿಕ ಪುತ್ತೂರಿಗೆ ಮೊದಲ ಬಸ್ ಪ್ರಯಾಣ ಬೆಳೆಸಿದೆ. ಬಸ್ ನಲ್ಲಿ ಪ್ರಯಾಣಿಸಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ಧರಾಮಯ್ಯರವರಿಗೆ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಜೈಕಾರ ಹಾಕುತ್ತಾ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹರೀಶ ಕುಮಾರ್ ಅವರು ಕಾಂಗ್ರೆಸ್ ಪಕ್ಷ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ.ಅದರ ಬಗ್ಗೆ ಆತಂಕ ಬೇಡ ಎಂದ ಅವರು ಕಾಂಗ್ರೆಸ್ ಸರ್ಕಾರ ಬಂದ ನಂತರ ಮೊದಲ ಗ್ಯಾರಂಟಿಗೆ ಚಾಲ ನೆ ದೊರಕಿದೆ. ಈ ಸಂಬಂಧ ಎಲ್ಲಾ ಮಹಿಳೆಯರಿಗೆ, ಮುಖ್ಯಮಂತ್ರಿಗಳಿಗೆ, ಉಪಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮೂರು ತಿಂಗಳಲ್ಲಿ ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಅಲ್ಲಿಯ ತನಕ ಆಧಾರ್ ಕಾರ್ಡ್ ಉಪಯೋಗಿಸಿಕೊಂಡು ಮಹಿಳೆಯರು ಶಕ್ತಿ ಯೋಜನೆಯನ್ನು ಸದುಪಯೋಗಿಪಡಿಸಿಕೊಳ್ಳಿ. ನಾವು ಪ್ರಣಾಳಿಕೆಯಲ್ಲಿ ಹೇಳಿದ ಭರವಸೆಗಳನ್ನು ಖಂಡಿತವಾಗಿ ಈಡೇರಿಸಿ ನುಡಿದಂತೆ ನಡೆಯುತ್ತೇವೆ ಎಂದು ಹೇಳಿದರು.ಮಾಜಿ ಶಾಸಕ ವಸಂತ ಬಂಗೇರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತಹಶೀಲ್ಧಾರ್ ಸುರೇಶ್ ಕುಮಾರ್ ಟಿ, ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಕೆ ಎಸ್ ಆರ್ ಟಿ ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ, ಧರ್ಮಸ್ಥಳ ಕೆ ಎಸ್ ಆರ್ ಟಿ ಸಿ ವಿಭಾಗಾಧಿಕಾರಿ ಉದಯ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು .

Related posts

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya
error: Content is protected !!