July 23, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

ಮಲವಂತಿಗೆ: ಪ್ರತಿ ವರ್ಷದಂತೆ ಈ ವರ್ಷವೂ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಸ.ಹಿ.ಪ್ರಾ.ಶಾಲೆ ಕಜಕೆ 1ರಿಂದ7 ನೇ ತರಗತಿ ಮಕ್ಕಳಿಗೆ ಬರೆಯುವ ( ನೋಟ್) ಪುಸ್ತಕಗಳನ್ನು ಬೆಳ್ತಂಗಡಿಯ ನೋಟರಿ ವಕೀಲರಾದ ಮುರಳಿ. ಬಿ. ಇವರು ಹಾಗೂ ಇವರ ಕುಟುಂಬದವರು ಜೂನ್.10ರಂದು ಶಾಲೆಗೆ ಆಗಮಿಸಿ ಉಚಿತವಾಗಿ ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುರಳಿ.ಬಿ. ಅವರ ಧರ್ಮಪತ್ನಿ ಶ್ರೀಮತಿ ಮನೋರಮ, ಪುತ್ರರಾದ ಮಯೂರ್ ಹಾಗೂ ಮಂದಾರ, ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶೇಖರ ಗೌಡ ಕಜಕೆ, ಸಮಿತಿಯ ಸದಸ್ಯರಾದ ವೆಂಕಟೇಶ್ ಪ್ರಸಾದ್, ಸ್ಥಳೀಯರಾದ ವಸಂತ ಲೋಂಡೆ ಗುರಿಗದ್ದೆ ಇವರೆಲ್ಲರೂ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಪ್ರಾರ್ಥನೆ ನಂತರ ಶಾಲಾ ಸಹ ಶಿಕ್ಷಕರಾದ ರಂಗನಾಥ ಬಿ.ಕೆ. ಎಲ್ಲರನ್ನು ಸ್ವಾಗತಿಸಿ, ಮುಖ್ಯ ಶಿಕ್ಷಕರಾದ ಕುಮಾರಸ್ವಾಮಿ ಕೆ.ಎನ್. ವಂದಿಸಿದರು. ಶಾಲಾ ಸಹ ಶಿಕ್ಷಕರಾದ ಮಂಜುನಾಥ ಕಾರ್ಯಕ್ರಮವನ್ನು ನಿರೂಪಿಸಿ ಗೌರವ ಶಿಕ್ಷಕಿಯರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!