ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

ಮಲವಂತಿಗೆ: ಪ್ರತಿ ವರ್ಷದಂತೆ ಈ ವರ್ಷವೂ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಸ.ಹಿ.ಪ್ರಾ.ಶಾಲೆ ಕಜಕೆ 1ರಿಂದ7 ನೇ ತರಗತಿ ಮಕ್ಕಳಿಗೆ ಬರೆಯುವ ( ನೋಟ್) ಪುಸ್ತಕಗಳನ್ನು ಬೆಳ್ತಂಗಡಿಯ ನೋಟರಿ ವಕೀಲರಾದ ಮುರಳಿ. ಬಿ. ಇವರು ಹಾಗೂ ಇವರ ಕುಟುಂಬದವರು ಜೂನ್.10ರಂದು ಶಾಲೆಗೆ ಆಗಮಿಸಿ ಉಚಿತವಾಗಿ ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುರಳಿ.ಬಿ. ಅವರ ಧರ್ಮಪತ್ನಿ ಶ್ರೀಮತಿ ಮನೋರಮ, ಪುತ್ರರಾದ ಮಯೂರ್ ಹಾಗೂ ಮಂದಾರ, ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶೇಖರ ಗೌಡ ಕಜಕೆ, ಸಮಿತಿಯ ಸದಸ್ಯರಾದ ವೆಂಕಟೇಶ್ ಪ್ರಸಾದ್, ಸ್ಥಳೀಯರಾದ ವಸಂತ ಲೋಂಡೆ ಗುರಿಗದ್ದೆ ಇವರೆಲ್ಲರೂ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಪ್ರಾರ್ಥನೆ ನಂತರ ಶಾಲಾ ಸಹ ಶಿಕ್ಷಕರಾದ ರಂಗನಾಥ ಬಿ.ಕೆ. ಎಲ್ಲರನ್ನು ಸ್ವಾಗತಿಸಿ, ಮುಖ್ಯ ಶಿಕ್ಷಕರಾದ ಕುಮಾರಸ್ವಾಮಿ ಕೆ.ಎನ್. ವಂದಿಸಿದರು. ಶಾಲಾ ಸಹ ಶಿಕ್ಷಕರಾದ ಮಂಜುನಾಥ ಕಾರ್ಯಕ್ರಮವನ್ನು ನಿರೂಪಿಸಿ ಗೌರವ ಶಿಕ್ಷಕಿಯರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya

ಖ್ಯಾತ ಚಲನಚಿತ್ರ ನಿರ್ದೇಶಕ ವಿನು ಬಳಂಜ ಅವರ ತಾಯಿ ಮೀನಾಕ್ಷಿ ನಾಯ್ಗ ಅಟ್ಲಾಜೆ ನಿಧನ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya
error: Content is protected !!