25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಕುತ್ಲೂರು ಕಾರ್ಯಕ್ಷೇತ್ರದಲ್ಲಿ ಮಂಜುಶ್ರೀ ಭಜನಾ ಮಂದಿರದಲ್ಲಿ ಯಂತ್ರಶ್ರೀ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಗ್ರಾ.ಯೋ. ಕೃಷಿ ಮೇಲ್ವಿಚಾರಕ ಕೃಷ್ಣ ಗೌಡ ಮಾಹಿತಿ ನೀಡಿ, ಮುಂಗಾರು ಭತ್ತ ಕೃಷಿಯಲ್ಲಿ ಯಂತ್ರಶ್ರೀ ಮಾದರಿಯಲ್ಲಿ ಕೃಷಿ ಮಾಡಿದರೆ ಕಡಿಮೆ ಖರ್ಚು ಮತ್ತು ಕಡಿಮೆ ಸಮಯದಲ್ಲಿ ಭತ್ತದ ಕೃಷಿ ಮಾಡಬಹುದು.


ಭೂಮಿಯನ್ನು ಹದಗೊಳಿಸುವುದರಿಂದ ಕೊಯ್ಲುವರೆಗೂ ಸಂಪೂರ್ಣ ಯಾಂತ್ರಿಕೃತಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶ. ಭತ್ತ ಕೃಷಿಯಿಂದ ವಿಮುಖರಾಗುತ್ತಿರುವ ರೈತರಿಗೆ ಭತ್ತ ಕೃಷಿಯನ್ನು ಆಕರ್ಷಣಿಯವಾಗಿ ಮಾಡುವುದು ಇದರ ಪ್ರಮುಖ ಉದ್ದೇಶ. ವೆಚ್ಚದಲ್ಲಿ ಕಡಿತಗೊಂಡು ಇಳುವರಿ ಹೆಚ್ಚಳವನ್ನು ಗಮನಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಅಣ್ಣಿ ಎಂ.ಕೆ, ಒಕ್ಕೂಟದ ಉಪಾಧ್ಯಕ್ಷೆ ಜಯಂತಿ ಹಾಗೂ ರೋಹನ್, ರವೀಶ್, ಪೂವಪ್ಪ, ಸೇವಾ ಪ್ರತಿನಿಧಿ ಕೇಶವ ಪೂಜಾರಿ‌ ಉಪಸ್ಥಿತರಿದ್ದರು. ರೈತ ತಂಡದ ಸದಸ್ಯರು ಭಾಗವಹಿಸಿ ಇದರ ಪ್ರಯೋಜನ ಪಡೆದರು.

Related posts

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya
error: Content is protected !!