July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಕುತ್ಲೂರು ಕಾರ್ಯಕ್ಷೇತ್ರದಲ್ಲಿ ಮಂಜುಶ್ರೀ ಭಜನಾ ಮಂದಿರದಲ್ಲಿ ಯಂತ್ರಶ್ರೀ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಗ್ರಾ.ಯೋ. ಕೃಷಿ ಮೇಲ್ವಿಚಾರಕ ಕೃಷ್ಣ ಗೌಡ ಮಾಹಿತಿ ನೀಡಿ, ಮುಂಗಾರು ಭತ್ತ ಕೃಷಿಯಲ್ಲಿ ಯಂತ್ರಶ್ರೀ ಮಾದರಿಯಲ್ಲಿ ಕೃಷಿ ಮಾಡಿದರೆ ಕಡಿಮೆ ಖರ್ಚು ಮತ್ತು ಕಡಿಮೆ ಸಮಯದಲ್ಲಿ ಭತ್ತದ ಕೃಷಿ ಮಾಡಬಹುದು.


ಭೂಮಿಯನ್ನು ಹದಗೊಳಿಸುವುದರಿಂದ ಕೊಯ್ಲುವರೆಗೂ ಸಂಪೂರ್ಣ ಯಾಂತ್ರಿಕೃತಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶ. ಭತ್ತ ಕೃಷಿಯಿಂದ ವಿಮುಖರಾಗುತ್ತಿರುವ ರೈತರಿಗೆ ಭತ್ತ ಕೃಷಿಯನ್ನು ಆಕರ್ಷಣಿಯವಾಗಿ ಮಾಡುವುದು ಇದರ ಪ್ರಮುಖ ಉದ್ದೇಶ. ವೆಚ್ಚದಲ್ಲಿ ಕಡಿತಗೊಂಡು ಇಳುವರಿ ಹೆಚ್ಚಳವನ್ನು ಗಮನಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಅಣ್ಣಿ ಎಂ.ಕೆ, ಒಕ್ಕೂಟದ ಉಪಾಧ್ಯಕ್ಷೆ ಜಯಂತಿ ಹಾಗೂ ರೋಹನ್, ರವೀಶ್, ಪೂವಪ್ಪ, ಸೇವಾ ಪ್ರತಿನಿಧಿ ಕೇಶವ ಪೂಜಾರಿ‌ ಉಪಸ್ಥಿತರಿದ್ದರು. ರೈತ ತಂಡದ ಸದಸ್ಯರು ಭಾಗವಹಿಸಿ ಇದರ ಪ್ರಯೋಜನ ಪಡೆದರು.

Related posts

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಳದಂಗಡಿಯ ಡಾ| ಮಮತಾ ಎಚ್ ರವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya
error: Content is protected !!