ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಕೊಕ್ಕಡ :ವಿದ್ಯಾರ್ಥಿನಿಯೊಬ್ಬಳು ಅಸೌಖ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿರುವಾಗಲೇ ಸಾವನ್ನಪ್ಪಿದ ಘಟನೆ, ಜೂ.12 ರಂದು ಸಂಭವಿಸಿದೆ.

ಕೌಕ್ರಾಡಿ ಗ್ರಾಮದ ಮೀಯಾಳ ನಿವಾಸಿ ನಾಗೇಶ್ ನಳಿಯಾರ್ ಮತ್ತು ಹೇಮಾವತಿ ದಂಪತಿಯ ಪುತ್ರಿ ಶ್ರಾವ್ಯ (17ವ.) ಮೃತಪಟ್ಟ ದುರ್ದೈವಿ.

ಉಜಿರೆಯ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಶ್ರಾವ್ಯ ಕಳೆದ ಕೆಲವು ದಿನಗಳಿಂದ ಉರಿಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಹತ್ತು ದಿನಗಳ ಹಿಂದೆ ಆಕೆ ಆರೋಗ್ಯದಲ್ಲಿ ತೀರ ಏರುಪೇರು ಉಂಟಾಗಿದ್ದು, ಚಿಕಿತ್ಸೆಗಾಗಿ ಪುತ್ತೂರಿನ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರಾವ್ಯ ಮೃತಪಟ್ಟಿದ್ದಾರೆ.

Leave a Comment

error: Content is protected !!