25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

ಬಳಂಜ :ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್(ರಿ) ಪುತ್ತೂರು ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಯೋಜಕತ್ವದಲ್ಲಿ ಬಳಂಜ ಸರಕಾರಿ ಪ್ರೌಢಶಾಲೆಯ 8,9,10ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ನೋಟ್‍ ಪುಸ್ತಕ, ಬ್ಯಾಗ್ ಮತ್ತು ಜಾಮೆಟ್ರಿ ಬಾಕ್ಸ್ಗಳ ವಿತರಣೆಯನ್ನು ಜೂ.12 ರಂದು ನೆರವೇರಿಸಲಾಯಿತು.

ಒಟ್ಟು 61 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಫಲಾನುಭವಿಗಳಾಗಿದ್ದು,

ಮುಖ್ಯ ಅತಿಥಿಗಳಾಗಿ ಪ್ರೌಢಶಾಲಾ SDMC ಸದಸ್ಯ ಉಸ್ಮಾನ್, ಬಳಂಜ ಗ್ರಾ.ಪಂ ಪಿಡಿಒ ಶ್ರೀನಿವಾಸ್‍ ಭಾಗವಹಿಸಿದ್ದರು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಸ್ಥಳೀಯ ಬಳಂಜ ನಿವಾಸಿಗಳಾದ ಸುಕೇಶ್ ಪೂಜಾರಿ ಮತ್ತು ಶ್ರೀಮತಿ ಕವಿತಾ ಸುಕೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ಸತ್ಯವತಿ ಎಂ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಶ್ರೀಮತಿ ವೀಣಾ ವಂದಿಸಿದರು.

.ಶಾಲಾ ಶಿಕ್ಷಕರಾದ ಗಣೇಶ್ ಮತ್ತು ಶ್ರೀಮತಿ ಸುಕನ್ಯರವರು ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya
error: Content is protected !!