July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

ಬೆಳ್ತಂಗಡಿ : ಸಕಲೇಶಪುರದಲ್ಲಿ ಜರಗಿದ ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಾಂತ್ಯ 5ರ ಪ್ರಾಂತ್ಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ 2022-2023ನೇ ಸಾಲಿನ ಅತ್ಯುತ್ತಮ ಪ್ರಾಂತ್ಯ ಅಧ್ಯಕ್ಷರಾಗಿ ಮೂಡಿ ಬಂದಿದ್ದಾರೆ. ಇವರ ಸೇವಾವಧಿಯಲ್ಲಿ ಲಯನ್ಸ್ ಜಿಲ್ಲೆಗೆ ಪ್ರಾಂತ್ಯದಿಂದ 20 ಎಂ. ಜೆ. ಎಫ್,. ನೂತನ ಕ್ಲಬ್ ಬಪ್ಪನಾಡು ಇನ್ಸ್ಪೈರ್, ಪ್ರಾಂತ್ಯದ ಕ್ಲಬ್ ಗಳು ಹಲವು ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದೆ.

ಬಂಗಾಡಿ ಪ್ರೌಢ ಶಾಲೆಗೆ ಸ್ಮಾರ್ಟ್ ತರಗತಿ ಕೊಡುಗೆ, ಪ್ರಾಂತೀಯ ಸಮ್ಮೇಳನದ ಆಯೋಜನೆ ಯಶಸ್ವಿಯಾಗಿ ನಡೆದಿದೆ. ಸಕಲೇಶಪುರದಲ್ಲಿ ಜಿಲ್ಲಾ ರಾಜ್ಯಪಾಲ ಸಂಜಿತ್ ಶೆಟ್ಟಿ ನೇತೃತ್ವದಲ್ಲಿ ಜರಗಿದ ಕೃತಜ್ಞಾ ಸಮ್ಮೇಳನದಲ್ಲಿ ಬೆಳ್ತಂಗಡಿ ಅಧ್ಯಕ್ಷ ದೇವಿಪ್ರಸಾದ್ ಬೊಲ್ಮ, ಕೋಶಾಧಿಕಾರಿ ಪಂಚಾಕ್ಷರಪ್ಪ, ಪೂರ್ವಾಧ್ಯಕ್ಷರುಗಳಾದ ರಾಮಕೃಷ್ಣ ಗೌಡ, ಧರನೇಂದ್ರ ಕೆ. ಜೈನ್, ರವೀಂದ್ರ ಶೆಟ್ಟಿ, ಸದಸ್ಯರುಗಳಾದ ದತ್ತಾತ್ರಯ, ಅಶ್ರಫ್ ಆಲಿ ಕುಂಝಿ, ಪ್ರಭಾಕರ ಗೌಡ ಬೊಲ್ಮ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya
error: Content is protected !!