25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

ಶಿಶಿಲ: ಜೂ. 11 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣದಿಂದ ಸಂಪನ್ನಗೊಂಡ ಶ್ರೀ ಸಿದ್ದ ಭಗವಂತರು ವಿರಾಜಮಾನರಾದ ಈ ಸಂದರ್ಭದಲ್ಲಿ ಬಿಂಬವನ್ನು ತರುವಲ್ಲಿ ಸಹಕರಿಸಿದ ಅಜಿತ್ ರವರನ್ನು ಆಡಳಿತ ಮಂಡಳಿ ಹಾಗೂ ದಾನಿಗಳಾದ ಉಜಿರೆಯ ಎಸ್. ಡಿ ಶೆಟ್ಟಿ ದಂಪತಿಗಳು ಗೌರವಿಸಿದರು. ‌

ಪಡಂಗಡಿ ಜಿನೇಂದ್ರ ಭಂಗ , ಉಜಿರೆಯ ನಾಗರಾಜ ಪೂವಣಿ ಯವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಯಶೋಧರ ಶೆಟ್ಟಿ ಸಮೃಧಿ, ರವಿರಾಜ ಶೆಟ್ಟಿ ಕುಂಡೊವು, ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯಕುಮಾರ್, ಕಾರ್ಯಾಧ್ಯಕ್ಷರಾದ ಚಿತ್ತರಂಜನ್, ಉಪಾಧ್ಯಕ್ಷರಾದ ಜಿನರಾಜ ಪೂವಣಿ, ಕೋಶಾಧಿಕಾರಿ ಪಣಿರಾಜ್ ಜೈನ್, ವೀರೇಂದ್ರ ಕುಮಾರ್ ವಳಂಬಲ, ಸಂತೋಷ್ ಕುಮಾರ್ ವಳಂಬಲ, ಉಜಿರೆಯ ನಾಭಿರಾಜ ಪೂವಣಿ, ರಾಣಿ ಶಿಶುಗಲಿ ಜೈನ ಮಹಿಳಾ ಸಮಾಜದ ಅಧ್ಯಕ್ಷ ಶ್ರೀಮತಿ ನಾಗಕನ್ನಿಕ, ಶ್ರೀಮತಿ ಶಶಿಪ್ರಭ ಶ್ರೀಮತಿ ಸುಗುಣ ಶೆಟ್ಟಿ, ಶ್ರೀಮತಿ ಶಕುಂತಲಾ ಜೈನ್ ಶ್ರೀಮತಿ ಸುರಭಿ, ಶ್ರೀಮತಿ ಜಯಶ್ರೀ, ಶ್ರೀಮತಿ ಸರೋಜಾ ಮೊದಲಾದವರು ಉಪಸ್ಥಿತರಿದ್ದರು.

ಭೋಜನದ ವ್ಯವಸ್ಥೆಯನ್ನು ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಮಾಡಿದರು. ಕಾರ್ಯಕ್ರಮವನ್ನು ಡಾ.ಜಯಕೀರ್ತಿ ಜೈನ್ ನಿರ್ವಹಣೆ ಮಾಡಿದರು

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya
error: Content is protected !!