September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

ಶಿಶಿಲ: ಜೂ. 11 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣದಿಂದ ಸಂಪನ್ನಗೊಂಡ ಶ್ರೀ ಸಿದ್ದ ಭಗವಂತರು ವಿರಾಜಮಾನರಾದ ಈ ಸಂದರ್ಭದಲ್ಲಿ ಬಿಂಬವನ್ನು ತರುವಲ್ಲಿ ಸಹಕರಿಸಿದ ಅಜಿತ್ ರವರನ್ನು ಆಡಳಿತ ಮಂಡಳಿ ಹಾಗೂ ದಾನಿಗಳಾದ ಉಜಿರೆಯ ಎಸ್. ಡಿ ಶೆಟ್ಟಿ ದಂಪತಿಗಳು ಗೌರವಿಸಿದರು. ‌

ಪಡಂಗಡಿ ಜಿನೇಂದ್ರ ಭಂಗ , ಉಜಿರೆಯ ನಾಗರಾಜ ಪೂವಣಿ ಯವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಯಶೋಧರ ಶೆಟ್ಟಿ ಸಮೃಧಿ, ರವಿರಾಜ ಶೆಟ್ಟಿ ಕುಂಡೊವು, ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯಕುಮಾರ್, ಕಾರ್ಯಾಧ್ಯಕ್ಷರಾದ ಚಿತ್ತರಂಜನ್, ಉಪಾಧ್ಯಕ್ಷರಾದ ಜಿನರಾಜ ಪೂವಣಿ, ಕೋಶಾಧಿಕಾರಿ ಪಣಿರಾಜ್ ಜೈನ್, ವೀರೇಂದ್ರ ಕುಮಾರ್ ವಳಂಬಲ, ಸಂತೋಷ್ ಕುಮಾರ್ ವಳಂಬಲ, ಉಜಿರೆಯ ನಾಭಿರಾಜ ಪೂವಣಿ, ರಾಣಿ ಶಿಶುಗಲಿ ಜೈನ ಮಹಿಳಾ ಸಮಾಜದ ಅಧ್ಯಕ್ಷ ಶ್ರೀಮತಿ ನಾಗಕನ್ನಿಕ, ಶ್ರೀಮತಿ ಶಶಿಪ್ರಭ ಶ್ರೀಮತಿ ಸುಗುಣ ಶೆಟ್ಟಿ, ಶ್ರೀಮತಿ ಶಕುಂತಲಾ ಜೈನ್ ಶ್ರೀಮತಿ ಸುರಭಿ, ಶ್ರೀಮತಿ ಜಯಶ್ರೀ, ಶ್ರೀಮತಿ ಸರೋಜಾ ಮೊದಲಾದವರು ಉಪಸ್ಥಿತರಿದ್ದರು.

ಭೋಜನದ ವ್ಯವಸ್ಥೆಯನ್ನು ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಮಾಡಿದರು. ಕಾರ್ಯಕ್ರಮವನ್ನು ಡಾ.ಜಯಕೀರ್ತಿ ಜೈನ್ ನಿರ್ವಹಣೆ ಮಾಡಿದರು

Related posts

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!