ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಅಳದಂಗಡಿ : ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಜೂ 11 ರಂದು ಸುಂದರ ಆಚಾರ್ಯ ಕುದ್ಯಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜೂ 25. ರಂದು ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಅಳದಂಗಡಿಯಲ್ಲಿ 15 ನೇ ವರ್ಷದ ವಿಶ್ವಕರ್ಮ ಪೂಜೆಯು, ಗುರುಗಳಾದ ಶ್ರೀ ಶ್ರೀ ಶ್ರೀ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾ ಸ್ವಾಮೀಜಿ ಕಟಪಾಡಿ, ಪಡುಕುತ್ಯಾರ್ ಇವರ ದಿವ್ಯ ಉಪಸ್ಥಿತಿ ಹಾಗೂ , ಆಶೀರ್ವಚನ ನೀಡಲಿರುವರು. ಅಧ್ಯಕ್ಷತೆ ಸುಂದರಾಚಾರ್ಯ ಕುದ್ಯಾಡಿ . ಗೌರವ ಉಪಸ್ಥಿತಿ, ಪ್ರಕಾಶ್ ಪುರೋಹಿತ್, ಭಾಗವಹಿಸಲಿದ್ದಾರೆ.

ಸಭೆಯಲ್ಲಿ ವಲಯಾ ಉಪಾಧ್ಯಕ್ಷ ರಮೇಶ್ ಆಚಾರ್ಯ , ನಿಕಟ ಪೂರ್ವ ಅಧ್ಯಕ್ಷ ಸದಾನಂದ ಆಚಾರ್ಯ, ಜೊತೆ ಕಾರ್ಯದಶಿ ಲಕ್ಷ್ಮಣ ಆಚಾರ್ಯ ಕುದ್ಯಾಡಿ, ಬಾಬು ಆಚಾರ್ಯ ಕುದ್ಯಾಡಿ, ಆನಂದ ಆಚಾರ್ಯ ಕೆದ್ದು, ವಲಯ ಹಾಗೂ ಗ್ರಾಮ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

ವಲಯ ಕಾರ್ಯದರ್ಶಿ ಮಂಜುನಾಥ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Leave a Comment

error: Content is protected !!