22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಕುತ್ಲೂರು ಕಾರ್ಯಕ್ಷೇತ್ರದಲ್ಲಿ ಮಂಜುಶ್ರೀ ಭಜನಾ ಮಂದಿರದಲ್ಲಿ ಯಂತ್ರಶ್ರೀ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಗ್ರಾ.ಯೋ. ಕೃಷಿ ಮೇಲ್ವಿಚಾರಕ ಕೃಷ್ಣ ಗೌಡ ಮಾಹಿತಿ ನೀಡಿ, ಮುಂಗಾರು ಭತ್ತ ಕೃಷಿಯಲ್ಲಿ ಯಂತ್ರಶ್ರೀ ಮಾದರಿಯಲ್ಲಿ ಕೃಷಿ ಮಾಡಿದರೆ ಕಡಿಮೆ ಖರ್ಚು ಮತ್ತು ಕಡಿಮೆ ಸಮಯದಲ್ಲಿ ಭತ್ತದ ಕೃಷಿ ಮಾಡಬಹುದು.


ಭೂಮಿಯನ್ನು ಹದಗೊಳಿಸುವುದರಿಂದ ಕೊಯ್ಲುವರೆಗೂ ಸಂಪೂರ್ಣ ಯಾಂತ್ರಿಕೃತಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶ. ಭತ್ತ ಕೃಷಿಯಿಂದ ವಿಮುಖರಾಗುತ್ತಿರುವ ರೈತರಿಗೆ ಭತ್ತ ಕೃಷಿಯನ್ನು ಆಕರ್ಷಣಿಯವಾಗಿ ಮಾಡುವುದು ಇದರ ಪ್ರಮುಖ ಉದ್ದೇಶ. ವೆಚ್ಚದಲ್ಲಿ ಕಡಿತಗೊಂಡು ಇಳುವರಿ ಹೆಚ್ಚಳವನ್ನು ಗಮನಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಅಣ್ಣಿ ಎಂ.ಕೆ, ಒಕ್ಕೂಟದ ಉಪಾಧ್ಯಕ್ಷೆ ಜಯಂತಿ ಹಾಗೂ ರೋಹನ್, ರವೀಶ್, ಪೂವಪ್ಪ, ಸೇವಾ ಪ್ರತಿನಿಧಿ ಕೇಶವ ಪೂಜಾರಿ‌ ಉಪಸ್ಥಿತರಿದ್ದರು. ರೈತ ತಂಡದ ಸದಸ್ಯರು ಭಾಗವಹಿಸಿ ಇದರ ಪ್ರಯೋಜನ ಪಡೆದರು.

Related posts

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya
error: Content is protected !!