23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

ಕೊಕ್ಕಡ: ಕೊಕ್ಕಡದ ವಿದ್ಯಾರ್ಥಿನಿ ಪುತ್ತೂರಿನ ಪಡೀಲ್ ನಲ್ಲಿರುವ ಹಾಸ್ಟೆಲ್ ಒಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಗೆ ದಾಖಲಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ.11 ರಂದು ನಡೆದಿದೆ.

ಕೊಕ್ಕಡ ಗ್ರಾಮದ ನೇತ್ರಾಳ ನಿವಾಸಿ ಶ್ರೀಧರ ಆಚಾರ್ಯ ಹಾಗೂ ದಿ.ಪುಷ್ಪಾ ದಂಪತಿ ಪುತ್ರಿ ರೇಖಾ(15ವ) ಆತ್ಮಹತ್ಯೆ ಮಾಡಿಕೊಂಡವರು. ರೇಖಾ ಅವರ ತಂದೆ ಕೂಲಿ ಕೆಲಸ ಮಾಡುತ್ತಿದ್ದು, ವರ್ಷದ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದ ರೇಖಾರವರು ತಾಯಿಯ ನಿಧನದ ಬಳಿಕ ಮಾನಸಿಕವಾಗಿ ಕುಗ್ಗಿದ್ದ ರೇಖಾ ಸಂಬಂಧಿಕರ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ರೇಖಾಳನ್ನು ಅತ್ತೆ ಒತ್ತಾಯದ ಮೇರೆಗೆ ಪುತ್ತೂರಿನ ಪಡೀಲ್ ನಲ್ಲಿರುವ ಹಾಸ್ಟೆಲ್ ಗೆ ಸೇರಿಸಿ ಓದುವಂತೆ ಹೇಳುತ್ತಿದ್ದರು ಎನ್ನಲಾಗಿದೆ. ಮಾನಸಿಕ ಒತ್ತಡಕ್ಕೆ ಒಳಗಾದ ರೇಖಾ ಇಲಿಪಾಷನ ಸೇವಿಸಿ ವಾರದ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಸದೆ ಜೂ.11 ರಂದು ನಿಧನರಾಗಿದ್ದಾರೆ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

Suddi Udaya

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!