22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

ಕೊಕ್ಕಡ: ಕೊಕ್ಕಡದ ವಿದ್ಯಾರ್ಥಿನಿ ಪುತ್ತೂರಿನ ಪಡೀಲ್ ನಲ್ಲಿರುವ ಹಾಸ್ಟೆಲ್ ಒಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಗೆ ದಾಖಲಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ.11 ರಂದು ನಡೆದಿದೆ.

ಕೊಕ್ಕಡ ಗ್ರಾಮದ ನೇತ್ರಾಳ ನಿವಾಸಿ ಶ್ರೀಧರ ಆಚಾರ್ಯ ಹಾಗೂ ದಿ.ಪುಷ್ಪಾ ದಂಪತಿ ಪುತ್ರಿ ರೇಖಾ(15ವ) ಆತ್ಮಹತ್ಯೆ ಮಾಡಿಕೊಂಡವರು. ರೇಖಾ ಅವರ ತಂದೆ ಕೂಲಿ ಕೆಲಸ ಮಾಡುತ್ತಿದ್ದು, ವರ್ಷದ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದ ರೇಖಾರವರು ತಾಯಿಯ ನಿಧನದ ಬಳಿಕ ಮಾನಸಿಕವಾಗಿ ಕುಗ್ಗಿದ್ದ ರೇಖಾ ಸಂಬಂಧಿಕರ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ರೇಖಾಳನ್ನು ಅತ್ತೆ ಒತ್ತಾಯದ ಮೇರೆಗೆ ಪುತ್ತೂರಿನ ಪಡೀಲ್ ನಲ್ಲಿರುವ ಹಾಸ್ಟೆಲ್ ಗೆ ಸೇರಿಸಿ ಓದುವಂತೆ ಹೇಳುತ್ತಿದ್ದರು ಎನ್ನಲಾಗಿದೆ. ಮಾನಸಿಕ ಒತ್ತಡಕ್ಕೆ ಒಳಗಾದ ರೇಖಾ ಇಲಿಪಾಷನ ಸೇವಿಸಿ ವಾರದ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಸದೆ ಜೂ.11 ರಂದು ನಿಧನರಾಗಿದ್ದಾರೆ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya
error: Content is protected !!