July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

ಮಡಂತ್ಯಾರು : ಗ್ರಾಮ ಪಂಚಾಯತ್ ಮಡಂತ್ಯಾರು ಇದರ ವತಿಯಿಂದ ಜೆಸಿಐ ಮಡಂತ್ಯಾರು, ಸೇಕ್ರೆಡ್ ಹಾರ್ಟ್ ಕಾಲೇಜ್ ಎನ್.ಎಸ್.ಎಸ್. ಘಟಕ ಮತ್ತು ಎನ್.ಸಿ.ಸಿ. ಘಟಕ, ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ವಿಪತ್ತು ನಿರ್ವಹಣಾ ತಂಡ ಮಡಂತ್ಯಾರು ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಜಲಮೂಲ ಶುಚಿತ್ವ ಮತ್ತು ಹಣ್ಣು ಹಂಪಲು ಗಿಡ ವಿತರಣಾ ಕಾರ್ಯಕ್ರಮವು ಗ್ರಾಮ ಪಂಚಾಯಿತಿ ಮಡಂತ್ಯಾರು ಪೆದ್ಯಾರಿನಲ್ಲಿ ಜೂ 10 ರಂದು ನಡೆಯಿತು.


ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ, ಉಪಾಧ್ಯಕ್ಷೆ ಶ್ರೀಮತಿ ಸಂಗೀತಾ ಶೆಟ್ಟಿ, ಪಂಚಾಯತ್ ಸದಸ್ಯ ವಿಶ್ವನಾಥ್ ಪೂಜಾರಿ, ಶ್ರೀಮತಿ ಮೋಹಿನಿ, ಕಿಶೋರ್ ಕುಮಾರ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಜೆಸಿಐ ಮಡಂತ್ಯಾರು ಘಟಕದ ಪೂರ್ವಾಧ್ಯಕ್ಷರು, ವಲಯ 15ರ ಗೋಗ್ರಿನ್ ವಿಭಾಗದ ನಿರ್ದೇಶಕರಾದ ಜೇಸಿ ನವೀನ್ ಕೊಡ್ಲಕ್ಕೆ, ಘಟಕಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯ, ಜೆಸಿಐ ಮಡಂತ್ಯಾರು ಘಟಕದ ನಿಕಟ ಪೂರ್ವಾಧ್ಯಕ್ಷರು, ವಲಯ ಉಪಾಧ್ಯಕ್ಷರಾದ ಜೇಸಿ ಭರತ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕರಾದ ಜೇಸಿ ಸಂಯುಕ್ತ ಕರ್ತಿಲ, ಎನ್ಎಸ್ಎಸ್ ಮಡಂತ್ಯಾರು ಘಟಕದ ಮುಖ್ಯಸ್ಥರಾದ ಪ್ರಶಾಂತ್, ಎನ್.ಸಿ.ಸಿ ಮಡಂತ್ಯಾರು ಘಟಕದ ಮುಖ್ಯಸ್ಥರಾದ ಲೆಫ್ಟಿನೆಟ್ ಆಲ್ವಿನ್ ಕೆ.ಜಿ ಹಾಗೂ ಪುಂಜಾಲಕಟ್ಟೆ ಘಟಕದ ಮುಖ್ಯಸ್ಥರಾದ ಸಂತೋಷ್, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಜೇಸಿ ಸದಸ್ಯರು ಮಡಂತ್ಯಾರು ಮತ್ತು ಪುಂಜಾಲಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ – ಶಾಲಾ ಅಭಿವೃದ್ಧಿ ಸಮಿತಿ ರಚನೆ

Suddi Udaya

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya
error: Content is protected !!