25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

ಮಡಂತ್ಯಾರು : ಗ್ರಾಮ ಪಂಚಾಯತ್ ಮಡಂತ್ಯಾರು ಇದರ ವತಿಯಿಂದ ಜೆಸಿಐ ಮಡಂತ್ಯಾರು, ಸೇಕ್ರೆಡ್ ಹಾರ್ಟ್ ಕಾಲೇಜ್ ಎನ್.ಎಸ್.ಎಸ್. ಘಟಕ ಮತ್ತು ಎನ್.ಸಿ.ಸಿ. ಘಟಕ, ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ವಿಪತ್ತು ನಿರ್ವಹಣಾ ತಂಡ ಮಡಂತ್ಯಾರು ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಜಲಮೂಲ ಶುಚಿತ್ವ ಮತ್ತು ಹಣ್ಣು ಹಂಪಲು ಗಿಡ ವಿತರಣಾ ಕಾರ್ಯಕ್ರಮವು ಗ್ರಾಮ ಪಂಚಾಯಿತಿ ಮಡಂತ್ಯಾರು ಪೆದ್ಯಾರಿನಲ್ಲಿ ಜೂ 10 ರಂದು ನಡೆಯಿತು.


ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ, ಉಪಾಧ್ಯಕ್ಷೆ ಶ್ರೀಮತಿ ಸಂಗೀತಾ ಶೆಟ್ಟಿ, ಪಂಚಾಯತ್ ಸದಸ್ಯ ವಿಶ್ವನಾಥ್ ಪೂಜಾರಿ, ಶ್ರೀಮತಿ ಮೋಹಿನಿ, ಕಿಶೋರ್ ಕುಮಾರ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಜೆಸಿಐ ಮಡಂತ್ಯಾರು ಘಟಕದ ಪೂರ್ವಾಧ್ಯಕ್ಷರು, ವಲಯ 15ರ ಗೋಗ್ರಿನ್ ವಿಭಾಗದ ನಿರ್ದೇಶಕರಾದ ಜೇಸಿ ನವೀನ್ ಕೊಡ್ಲಕ್ಕೆ, ಘಟಕಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯ, ಜೆಸಿಐ ಮಡಂತ್ಯಾರು ಘಟಕದ ನಿಕಟ ಪೂರ್ವಾಧ್ಯಕ್ಷರು, ವಲಯ ಉಪಾಧ್ಯಕ್ಷರಾದ ಜೇಸಿ ಭರತ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕರಾದ ಜೇಸಿ ಸಂಯುಕ್ತ ಕರ್ತಿಲ, ಎನ್ಎಸ್ಎಸ್ ಮಡಂತ್ಯಾರು ಘಟಕದ ಮುಖ್ಯಸ್ಥರಾದ ಪ್ರಶಾಂತ್, ಎನ್.ಸಿ.ಸಿ ಮಡಂತ್ಯಾರು ಘಟಕದ ಮುಖ್ಯಸ್ಥರಾದ ಲೆಫ್ಟಿನೆಟ್ ಆಲ್ವಿನ್ ಕೆ.ಜಿ ಹಾಗೂ ಪುಂಜಾಲಕಟ್ಟೆ ಘಟಕದ ಮುಖ್ಯಸ್ಥರಾದ ಸಂತೋಷ್, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಜೇಸಿ ಸದಸ್ಯರು ಮಡಂತ್ಯಾರು ಮತ್ತು ಪುಂಜಾಲಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ

Suddi Udaya
error: Content is protected !!