April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಕುಕ್ಕೇಡಿ : ಭಾರತೀಯ ಸಂಸ್ಕೃತಿಯನ್ನು ಅಳವಡಿಸುವುದು, ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸುವುದು, ವಿಧ್ಯೆಯ ಜೊತೆಗೆ ವಿನಯ, ಸಂಸ್ಕಾರಗಳನ್ನು ವಿದ್ಯಾರ್ಥಿ ದೆಸೆಯಲ್ಲಿ ಅಳವಡಿಸಿಕೊಂಡು ಮುಂದಿನ ಭವ್ಯ ಭಾರತದ ರತ್ನಗಳಾಗಿ ವಿದ್ಯಾರ್ಥಿಗಳು ಮೂಡಿ ಬರಲಿ ಎಂದು ಶುಭ ಹಾರೈಸಿದವರು. ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳಾದ ನಾಗೇಶ್ ಉಡುಪ ರವರು ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ಜೂ 11 ರಂದು ಮಂಜುಶ್ರೀ ಭಜನಾ ಮಂದಿರದಲ್ಲಿ ಹಮ್ಮಿಕೊಂಡ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಂಜುಶ್ರೀ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಕೆವೈ ಈಶ್ವರ ಭಟ್ ಮಂಜನಕ್ಕಿ ಇವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿರ್ಮಲ್ ಕುಮಾರ್ ಜೈನ್, ಮಂಜುಶ್ರೀ ಭಜನಾ ಮಂಡಳಿಯ ಕೋಶಾಧಿಕಾರಿ ಆನಂದ ಟೈಲರ್ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಕುಕ್ಕೇಡಿ ನಿಟ್ಟಡೆ ಗ್ರಾಮಗಳ ವ್ಯಾಪ್ತಿಯ ಎಂಟರಿಂದ ದ್ವಿತೀಯ ಪಿಯುಸಿ ವರೆಗಿನ 90 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು.

ಎಸ್.ಎಸ್.ಎಲ್.ಸಿ ಯಲ್ಲಿ 608 (97.23%) ಅಂಕ ಗಳಿಸಿದ ಬೊಳ್ಚಾಲು ರೀತಿಶ್ ಕುಲಾಲ್ ರವರನ್ನು ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.

ಮಾ| ನಿತೇಶ್ ರವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಮಂಡಳಿಯ ಮಾಜಿ ಅಧ್ಯಕ್ಷ ಭರತ್ ರಾಜ್ ಅಮೈ ರವರು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಮಂಡಳಿಯ ಅಧ್ಯಕ್ಷ ಜಗನ್ನಾಥ ದೇವಾಡಿಗ ನಿರೂಪಿಸಿದ ಕಾರ್ಯಕ್ರಮವನ್ನು ಕಾರ್ಯದರ್ಶಿ ಪದ್ಮನಾಭ ಬಿಯದಡಿ ವಂದಿಸಿದರು.

Related posts

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya
error: Content is protected !!