July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

ಉಜಿರೆ: ಎರಡು ದಶಕಗಳಿಂದ ಕೃಷಿಕರ ಸೇವೆಯಲ್ಲಿರುವ ಕಿರಣ್ ಆಗ್ರೋಟೆಕ್, ಉಜಿರೆ ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರವು ಚಾರ್ಮಾಡಿ ರಸ್ತೆಯ ಉಜಿರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡದಲ್ಲಿ ಜೂ. 12 ರಂದು ಉದ್ಘಾಟನೆಗೊಂಡಿತು.

ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯರು ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉಜಿರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್, ಕಾರಂತ ಹೊಟೇಲ್ ಮಾಲಕ ಅರವಿಂದ ಕಾರಂತ, ಡಾ| ಗೋಪಾಲಕೃಷ್ಣ ಉಡುಪಿ, ನಿವೃತ್ತ ಪ್ರೋ| ಗಣಪಯ್ಯ, ಪ್ರಗತಿಪರ ಕೃಷಿಕ ರಾಜಗೋಪಾಲ್ ಪೋಲ್ನಾಯ, ಅರುಣ್ ರೆಬೆಲ್ಲೊ ಕನ್ಯಾಡಿ, ಅಗ್ರಿಮ್ಯಾಟ್ ಸೇಲ್ಸ್ ನ ನಾರಾಯಣ ಸ್ವಾಮಿ, ಸ್ಟಿವನ್, ಸ್ಟೇಟ್ ಬ್ಯಾಂಕ್ ಇಂಡಿಯಾದ ಸೋಮಯಾಗಿ ಭಾಗವಹಿಸಿ, ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಸಂಗೀತಾ ಮತ್ತು ಪ್ರಕಾಶ್ ಬಿ.ಕೆ ರವರ ಸ್ವಾಗತಿಸಿ, ಸತ್ಕರಿಸಿದರು. ಡಾ ದಿನೇಶ್ ಸರಳಾಯ ಕಾರ್ಯಕ್ರಮ ನಿರೂಪಿಸಿದರು. ಅಗ್ರೋಟೆಕ್ ಸಿಬ್ಬಂದಿಗಳು ಸಹಕರಿಸಿದರು.

Related posts

ಮಾ.31-ಎ.4: ಸುಲ್ಕೇರಿ ನಾವರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಮಾ.31 ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya
error: Content is protected !!