September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

ಉಜಿರೆ: ಎರಡು ದಶಕಗಳಿಂದ ಕೃಷಿಕರ ಸೇವೆಯಲ್ಲಿರುವ ಕಿರಣ್ ಆಗ್ರೋಟೆಕ್, ಉಜಿರೆ ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರವು ಚಾರ್ಮಾಡಿ ರಸ್ತೆಯ ಉಜಿರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡದಲ್ಲಿ ಜೂ. 12 ರಂದು ಉದ್ಘಾಟನೆಗೊಂಡಿತು.

ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯರು ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉಜಿರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್, ಕಾರಂತ ಹೊಟೇಲ್ ಮಾಲಕ ಅರವಿಂದ ಕಾರಂತ, ಡಾ| ಗೋಪಾಲಕೃಷ್ಣ ಉಡುಪಿ, ನಿವೃತ್ತ ಪ್ರೋ| ಗಣಪಯ್ಯ, ಪ್ರಗತಿಪರ ಕೃಷಿಕ ರಾಜಗೋಪಾಲ್ ಪೋಲ್ನಾಯ, ಅರುಣ್ ರೆಬೆಲ್ಲೊ ಕನ್ಯಾಡಿ, ಅಗ್ರಿಮ್ಯಾಟ್ ಸೇಲ್ಸ್ ನ ನಾರಾಯಣ ಸ್ವಾಮಿ, ಸ್ಟಿವನ್, ಸ್ಟೇಟ್ ಬ್ಯಾಂಕ್ ಇಂಡಿಯಾದ ಸೋಮಯಾಗಿ ಭಾಗವಹಿಸಿ, ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಸಂಗೀತಾ ಮತ್ತು ಪ್ರಕಾಶ್ ಬಿ.ಕೆ ರವರ ಸ್ವಾಗತಿಸಿ, ಸತ್ಕರಿಸಿದರು. ಡಾ ದಿನೇಶ್ ಸರಳಾಯ ಕಾರ್ಯಕ್ರಮ ನಿರೂಪಿಸಿದರು. ಅಗ್ರೋಟೆಕ್ ಸಿಬ್ಬಂದಿಗಳು ಸಹಕರಿಸಿದರು.

Related posts

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಡ್ಲೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!