25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

ವೇಣೂರು : ಮಕ್ಕಳ ಜ್ಞಾನಕ್ಕೆ ಬೆಳಕನ್ನು ನೀಡುವ ಕಾರ್ಯ ಪಡ್ಡ್ಯಾರಬೆಟ್ಟ ಕ್ಷೇತ್ರದಿಂದ ನಿರಂತರ ನಡೆಯುತ್ತಿರುವುದು ಶ್ಲಾಘನೀಯ. ದೈವದ ಪ್ರಸಾದವೆಂಬಂತೆ ಮಕ್ಕಳು ಪುಸ್ತಕಗಳನ್ನು ಸ್ವೀಕರಿಸಿದ್ದಾರೆ. ಕಳೆದ 31 ವರ್ಷಗಳಿಂದ ವಿದ್ಯೆಗೆ ಪೂರಕವಾಗಿರುವ ಸೇವಾಕಾರ್ಯ ಮಾಡುತ್ತಿರುವ ಇಲ್ಲಿಯ ಧರ್ಮದರ್ಶಿಗಳು ಎಳೆಯ ಮಕ್ಕಳಿಗೆ ಸಂಸ್ಕಾರವನ್ನೂ ಧಾರೆಯೆರೆಯುತ್ತಿದ್ದಾರೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಪೆರಿಂಜೆ ಸಂತೃಪ್ತಿ ಸಭಾಭವನದಲ್ಲಿ ಜೂ.12ರಂದು ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಕೊಡಮಣಿತ್ತಾಯ ಮೂಲ ದೈವಸ್ಥಾನದ ವತಿಯಿಂದ ಹೊಸಂಗಡಿ, ಬಡಕೋಡಿ, ಮರೋಡಿ ಮತ್ತು ಕೊಕ್ರಾಡಿ ಗ್ರಾಮಗಳ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ ಮತ್ತು ವಿವಿಧ ಶಾಲೆಗಳಗೆ ಅತಿಥಿ ಶಿಕ್ಷಕರ ನಿಯೋಜನೆ ಕಾರ್ಯಕ್ರಮದಲ್ಲಿ ಅವರು ಪುಸ್ತಕ ವಿತರಿಸಿ ಮಾತನಾಡಿದರು.

ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರರಾದ ಎ. ಜೀವಂಧರ ಕುಮಾರ್ ಅವರು ಮಾತನಾಡಿ, ಇಂದು ೩೨ನೇ ವರ್ಷದ ಪುಸ್ತಕ ವಿತರಣೆ ಮಾಡುತ್ತಿದ್ದೇವೆ. ವಿದ್ಯಾದಾನ ಎಲ್ಲಕ್ಕಿಂತ ಮಿಗಿಲು ಅನ್ನುವ ನಂಬಿಕೆ ನಮ್ಮದು. ವಿದ್ಯೆ ಜೀವನಪರ್ಯಾಂತ ಶಾಸ್ವತವಾಗಿ ನೆಲೆ ನಿಲ್ಲುತ್ತದೆ ಎಂದರು. ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 50 ಸಾವಿರ ಮೊತ್ತದ ಸಹಾಯಹಸ್ತ ನೀಡಲಾಯಿತು. ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಅವರನ್ನು ಕ್ಷೇತ್ರದ ವತಿಯಿಂದ ಸಮ್ಮಾನಿಸಲಾಯಿತು. ಮಾರೂರು ಖಂಡಿಗದ ವೇ|ಮೂ| ರಾಮದಾಸ ಅಸ್ರಣ್ಣ ಆಶೀರ್ವಚನ ನೀಡಿದರು. ಹೊಸಂಗಡಿ ಗ್ರಾ.ಪಂ. ಅಧ್ಯಕ್ಷ ಕರುಣಾಕರ ಪೂಜಾರಿ, ಪೆರಾಡಿ ಪ್ರಾ.ಕೃ.ಪ. ಸಹಕಾರ ಸಂಘದ ನಿರ್ದೇಶಕ ಪ್ರಗತಿಪರ ಕೃಷಿಕ ಎನ್. ಸೀತಾರಾಮ ರೈ, ವೇಣೂರಿನ ಉದ್ಯಮಿ ಕೆ. ಭಾಸ್ಕರ ಪೈ, ಪೆರಿಂಜೆಗುತ್ತುವಿನ ಪ್ರಸನ್ನ ಪಡ್ಡಂದಡ್ಕ, ವಿಶ್ವಾಸ್ ಜೈನ್ ಬಾಲ್ನಗುತ್ತು, ಕ್ಷೇತ್ರದ ಗುತ್ತುಬರ್ಕೆಯವರು ಉಪಸ್ಥಿತರಿದ್ದರು. ಎ. ಜೀವಂಧರ ಕುಮಾರ್ ಸ್ವಾಗತಿಸಿ, ಪಿಡಿಒ ಗಣೇಶ್ ಶೆಟ್ಟಿ ನಿರೂಪಿಸಿದರು. ವಿಕಾಸ್ ಜೈನ್ ಬಾಲ್ನಗುತ್ತು ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya
error: Content is protected !!